ಅಜೆಕಾರು | ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು
Update: 2025-12-10 21:51 IST
ಸಾಂದರ್ಭಿಕ ಚಿತ್ರ | PC : PTI
ಅಜೆಕಾರು, ಡಿ.10: ಅಡಿಕೆ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಡಿ.9ರಂದು ಮಧ್ಯಾಹ್ನ ವೇಳೆ ಶಿರ್ಲಾಲು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕೆರ್ವಾಶೆ ಗ್ರಾಮದ ಮುಗ್ಗೆರಕಳ ನಿವಾಸಿ ನಾರಾಯಣ ಆರ್. ಎಂದು ಗುರುತಿಸಲಾಗಿದೆ. ಇವರು ಶಿರ್ಲಾಲು ಗ್ರಾಮದ ಜಯಪ್ರಕಾಶ್ ಅರಿಗ ಎಂಬವರ ತೋಟಕ್ಕೆ ಅಡಿಕೆ ಕೊಯ್ಯಲು ಹೋಗಿದ್ದು ಅಡಿಕೆ ಮರ ಹತ್ತಿ ಅಡಿಕೆ ಕೊಯ್ಯುತ್ತಿದ್ದ ನಾರಾಯಣ, ಆಕಸ್ಮಿಕವಾಗಿ ಮರದಿಂದ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟಞ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.