×
Ad

ಹಲ್ಲೆ ಪ್ರಕರಣ: ಆರೋಪಿಗೆ ಶಿಕ್ಷೆ

Update: 2023-09-24 21:14 IST

ಉಡುಪಿ, ಸೆ.23: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ 6 ತಿಂಗಳ ಶಿಕ್ಷೆ ಹಾಗೂ 10 ಸಾವಿರ ರೂ.ದಂಡ ವಿಧಿಸಿ ಉಡುಪಿಯ ಹೆಚ್ಚುವರಿ ಸಿ.ಜೆ.ಮತ್ತು ಎ.ಸಿ.ಜೆ.ಎಂ.ನ್ಯಾಯಾಲಯ ಶನಿವಾರ ಆದೇಶ ನೀಡಿದೆ.

ಮಹಾದೇವಪ್ಪ ಶಿಕ್ಷೆಗೆ ಗುರಿಯಾದ ಆರೋಪಿ. 2012ರಲ್ಲಿ ನಂದಿಕೂರು ಗ್ರಾಮದ ಅಡ್ವೆ ಅಣ್ಣಾಜಿಗೋಳಿಯಲ್ಲಿರುವ ಅಡ್ವೆಯ ವಿಜಯ ರೈ ಅವರ ಕಟ್ಟಡದ ಕೋಣೆಗೆ ಅಕ್ರಮವಾಗಿ ಪ್ರವೇಶಿಸಿ ಕೋಣೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಚೆನ್ನ ಅವರಿಗೆ ಹೊಡೆದು ರಕ್ತಗಾಯ ಉಂಟು ಮಾಡಿದ್ದನು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶ ಪಿ.ಆರ್.ಯೋಗೇಶ್, ಆರೋಪಿಗೆ ಶಿಕ್ಷೆ ವಿಧಿಸಿ ಆದೇಶ ನೀಡಿದರು. ಸರಕಾರದ ಪರವಾಗಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಬದರೀನಾಥ್ ನಾಯರಿ ವಾದ ಮಂಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News