×
Ad

ಭೈರವಿ ಆರ್. ಪಂಡ್ಯರಿಗೆ ಪಿಎಚ್‌ಡಿ ಪದವಿ

Update: 2023-09-14 21:39 IST

ಉಡುಪಿ, ಸೆ.14: ಪೂರ್ಣಪ್ರಜ್ಞ ಪದವಿ ಕಾಲೇಜಿನ ಹಿಂದಿ ವಿಭಾಗದ ಉಪನ್ಯಾಸಕಿಯಾಗಿರುವ ಭೈರವಿ ಆರ್. ಪಂಡ್ಯ, ಮಡಿಕೇರಿಯ ಫೀಲ್ಡ್ ಮಾರ್ಷಲ್ ಕರಿಯಪ್ಪ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥರಾಗಿರುವ ಡಾ.ಶ್ರೀಧರ ಹೆಗಡೆ ಇವರ ಮಾರ್ಗದರ್ಶನದಲ್ಲಿ ‘ಮಮತಾ ಕಾಲಿಯಾ ಔರ್ ವರ್ಷಾ ಅಡಾಲ್ಜ ಕಿ ಪ್ರಾತಿನಿಧಿಕ್ ಕಹಾನಿಯೋಂ ಮೆ ತುಲನಾತ್ಮಕ್ ಅನುಶೀಲನ್’ ವಿಷಯದ ಕುರಿತು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ ಸಂಶೋಧನ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ಲಭಿಸಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದ ಸಂದರ್ಭದಲ್ಲಿ ಭೈರವಿ ಅವರಿಗೆ ಪಿಎಚ್‌ಡಿ ಪದವಿಯನ್ನು ಪ್ರದಾನಿಸಲಾಗುವುದು ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News