×
Ad

ಬೈಕ್ - ಸ್ಕೂಟರ್ ಢಿಕ್ಕಿ: ಸವಾರೆ ಮೃತ್ಯು, ಮೂವರಿಗೆ ಗಾಯ

Update: 2023-11-21 20:21 IST

ಮಣಿಪಾಲ, ನ.21: ಬೈಕೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರೆ ಮೃತಪಟ್ಟು ಮೂವರು ಗಾಯಗೊಂಡ ಘಟನೆ ನ.20ರಂದು ಮಧ್ಯಾಹ್ನ ವೇಳೆ ವಿದ್ಯಾರತ್ನ ನಗರ ರೋಯಲ್ ಅಂಬೇಸಿ ಅಪಾರ್ಟ್‌ಮೆಂಟ್ ಸಮೀಪ ನಡೆದಿದೆ.

ಮೃತರನ್ನು ಬೈಕಿನ ಹಿಂಬದಿ ಸವಾರೆ ಸುಶ್ಮಿತಾ(19) ಎಂದು ಗುರುತಿಸಲಾಗಿದೆ. ಬೈಕ್ ಸವಾರ ರಾಹುಲ್, ಸ್ಕೂಟರ್ ಸವಾರರಾದ ಅನೂಜ್ ಮತ್ತು ಆದರ್ಶ ಎಂಬವರು ಗಾಯಗೊಂಡಿದ್ದಾರೆ. ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ರಸ್ತೆಯ ಕಾಯಿನ್ ಸರ್ಕಲ್ ನಿಂದ ಸಿಂಡಿಕೇಟ್ ಸರ್ಕಲ್ ಕಡೆಗೆ ಹೋಗುತ್ತಿದ್ದಾಗ ಬೈಕಿಗೆ, ಅದೇ ದಿಕ್ಕಿನಲ್ಲಿ ಬಂದ ಸ್ಕೂಟರ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ರಸ್ತೆಗೆ ಬಿದ್ದು ನಾಲ್ವರು ಸವಾರರು ಗಾಯಗೊಂಡರು. ಇವರಲ್ಲಿ ಗಂಭೀರವಾಗಿ ಗಾಯಗೊಂಡ ಸುಶ್ಮಿತಾ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News