×
Ad

ಬಿಜೆಪಿ ಹಿಂದುಳಿದ ವರ್ಗಗಳ ಪಕ್ಷ: ರಾಜೇಶ್ ಜಿ.ವಿ.

Update: 2023-10-15 20:05 IST

ಉಡುಪಿ, ಅ.15: ದೇಶದಾದ್ಯಂತ ಸಣ್ಣ ಸಣ್ಣ ಜಾತಿಗಳನ್ನು ಹುಡುಕಿ ಸ್ಥಾನಮಾನ ನೀಡಿದ ರಾಜಕೀಯ ಪಕ್ಷ ಬಿಜೆಪಿ. ದೇಶದ ಮೊದಲ ಒಬಿಸಿ ಪ್ರಧಾನಿಯನ್ನು ಮಾಡಿರುವುದು ಬಿಜೆಪಿ. ಈ ವರ್ಗ ಹಿಂದುತ್ವದ ಜೊತೆಗೆ ಬಲವಾಗಿ ನಿಂತಿದೆ. ಸರ್ವರ ಕಲ್ಯಾಣದ ಜೊತೆಗೆ ಒಬಿಸಿ ವರ್ಗದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿರುವ ಬಿಜೆಪಿ ಇಂದು ಹಿಂದುಳಿದ ವರ್ಗಗಳ ಪಕ್ಷವಾಗಿದೆ ಎಂದು ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಹೇಳಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಶಾಸಕರಾದ ಯಶ್ಪಾಲ್ ಎ. ಸುವರ್ಣ, ಸುನೀಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಮಾಜಿ ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್.ಮೆಂಡನ್, ಮುಖಂಡರಾದ ಮಟ್ಟಾರ್ ರತ್ನಾಕರ ಹೆಗ್ಡೆ, ರವಿ ಅಮೀನ್, ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಎಮ್. ಸುವರ್ಣ, ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಕಲ್ಮಾಡಿ ಮೊದಲಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News