×
Ad

ಬ್ರಹ್ಮಾವರ: ಟಾಟಾ ಏಸ್ ಢಿಕ್ಕಿ; ಪಾದಾಚಾರಿ ಮೃತ್ಯು

Update: 2024-03-10 15:10 IST

ಬ್ರಹ್ಮಾವರ: ಟಾಟಾ ಏಸ್ ವಾಹನ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಆರೂರು ಗ್ರಾಮದ ಕುಂಜಾಲು ಆಭರಣ ಗೇಟ್ ಮುಂಭಾಗದಲ್ಲಿ ಶನಿವಾರ ರಾತ್ರಿ ವೇಳೆ ಬಗ್ಗೆ ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಆರೂರಿನ ಕುಂಜಾಲು ನಿವಾಸಿ ಸುದರ್ಶನ್(38) ಎಂದು ಗುರುತಿಸಲಾಗಿದೆ.ಟಾಟಾ ಏಸ್ ವಾಹನ ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸುದರ್ಶನ್ ಅವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿರುವ ಅವರು ಬ್ರಹ್ಮಾವರ ಸರಕಾರಿ ಆಸ್ಪತ್ರೆಗೆ ಕರೆದು ಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News