×
Ad

ಬ್ರಹ್ಮಾವರ: ರಸ್ತೆಗೆ ಜೋತು ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಬೈಕ್ ಸವಾರ ಮೃತ್ಯು

Update: 2023-09-30 19:43 IST

ಬ್ರಹ್ಮಾವರ, ಸೆ.30: ರಸ್ತೆಯಲ್ಲಿ ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪೂರು ಗ್ರಾಮದ ಅಮ್ಮುಂಜೆ ಕೆಳಕುದ್ರು ಬಳಿ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ಧನಂಜಯ ಕುಂದರ್(60) ಎಂದು ಗುರುತಿಸಲಾಗಿದೆ. ತಡರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ವಿದ್ಯುತ್ ತಂತಿ ಸಡಿಲಗೊಂಡು ರಸ್ತೆಗೆ ಅಡ್ಡವಾಗಿ ಜೋತು ಬಿದ್ದಿತ್ತು. ಇಂದು ಬೆಳಗಿನ ಜಾವ ಮೀನುಗಾರಿಕೆಗೆ ಬೈಕಿನಲ್ಲಿ ತೆರಳುತ್ತಿದ್ದ ಧನಂಜಯ ಕುಂದರ್, ತಂತಿಯನ್ನು ಸ್ಪರ್ಶಿಸಿದರೆನ್ನಲಾಗಿದೆ. ಇದರಿಂದ ವಿದ್ಯುತ್ ಆಘಾತಕ್ಕೆ ಒಳಗಾದ ಅವರು ಬೈಕ್ ಸಮೇತ ರಸ್ತೆ ಬಿದ್ದರೆಂದು ತಿಳಿದುಬಂದಿದೆ.

ಗಂಭೀರವಾಗಿ ಅಸ್ವಸ್ಥಗೊಂಡ ಇವರು ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News