×
Ad

ಬ್ರಹ್ಮಾವರ: 75 ಲಕ್ಷ ರೂ.ವಂಚನೆ; ಪ್ರಕರಣ ದಾಖಲು

Update: 2024-08-20 21:30 IST

ಬ್ರಹ್ಮಾವರ, ಆ.20:ಫೈನಾನ್ಸಿನಲ್ಲಿ ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಯಲ್ಲಿ ಕೊಡಿಸುವುದಾಗಿ ನಂಬಿಸಿ ಹಲವರಿಗೆ ಒಟ್ಟು 75 ಲಕ್ಷರೂ.ಗಳನ್ನು ವಂಚಿಸಿದ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.

ಸುವಾಸಿನಿ ಹಾಗೂ ಆತನ ಸಹೋದ ವಾದಿರಾಜ ಎಂಬವರು ನಡೂರಿನ ನಿತ್ಯಾನಂದ ಎಂಬವರಿಗೆ 35 ಲಕ್ಷ ರೂ.ಸೇರಿ ದಂತೆ ಹಲವರಿಗೆ ಒಟ್ಟು 75 ಲಕ್ಷ ರೂ.ವಂಚಿಸಿದ ಆರೋಪಿಗಳು. ಮಣಿಪಾಲದ ಸಿಟಿಕಾರ್ಪ್ ಫೈನಾನ್ಸ್ ಎಂಬ ಹಣಕಾಸು ಸಂಸ್ಥೆಯಿಂದ ಹರಾಜಿನ ಮೂಲಕ ಪಡೆದ ಚಿನ್ನವನ್ನು ಕಡಿಮೆ ಬೆಲೆಗೆ ನೀಡುವುದಾಗಿ ಇವರು ನಿತ್ಯಾನಂದ (64) ಹಾಗೂ ಇತರರನ್ನು ನಂಬಿಸಿ 2023ರ ಡಿ.11ರಿಂದ 2024ರ ಜು.16ರವರೆಗೆ ಈ ಹಣವನ್ನು ಪಡೆದಿದ್ದರು ಎನ್ನಲಾಗಿದೆ.

ಆದರೆ ಇದುವರೆಗೂ ಅವರು ಹೇಳಿದ ಚಿನ್ನವನ್ನು ನೀಡದೇ, ಹೂಡಿಕೆ ಮಾಡಿದ ಹಣವನ್ನು ಹಿಂದಿರುಗಿಸದೇ ಮೋಸ ಮಾಡಿ ರುವುದಾಗಿಯೂ, ಹಣವನ್ನು ವಾಪಾಸು ಕೇಳಿದ್ದಕ್ಕೆ ಆರೋಪಿಗಳು ಬೆದರಿಕೆ ಹಾಕಿರುವುದಾಗಿ ಬ್ರಹ್ಮಾವರ ಠಾಣೆಯಲ್ಲಿ ದಾಖಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News