×
Ad

ಕಾರು - ಬೈಕ್ ಢಿಕ್ಕಿ: ಸವಾರ ಮೃತ್ಯು

Update: 2024-08-12 20:53 IST

ಬೈಂದೂರು: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಆ.11ರಂದು ಮಧ್ಯಾಹ್ನ ವೇಳೆ ಬೈಂದೂರು ಗ್ರಾಮದ ಮಯ್ಯಾಡಿ ಕಿರು ಸೇತುವೆ ಸಮೀಪ ನಡೆದಿದೆ.

ಮೃತರನ್ನು ಸವಾರ ಗುರುರಾಜ್ ಎಂದು ಗುರುತಿಸಲಾಗಿದೆ. ಹಿಂಬದಿ ಸವಾರ ಮಂಜುನಾಥ್ ಎಂಬವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೈಂದೂರು ಕಡೆಯಿಂದ ಕೊಲ್ಲೂರು ಕಡೆಗೆ ಹೋಗುತ್ತಿದ್ದ ಬೈಕ್ ಓವರಟೇಕ್ ಮಾಡುವ ಭರದಲ್ಲಿ ಕೊಲ್ಲೂರು ಕಡೆಯಿಂದ ಬೈಂದೂರು ಕಡೆಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಬೈಕ್ ಸಮೇತ ಸವಾರರು ರಸ್ತೆಗೆ ಬಿದ್ದರೆನ್ನಲಾಗಿದೆ. ಇವರಲ್ಲಿ ಗಂಭೀರವಾಗಿ ಗಾಯಗೊಂಡ ಗುರುರಾಜ್, ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News