×
Ad

ಕಾರು ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು

Update: 2023-07-31 21:39 IST

ಕುಂದಾಪುರ, ಜು.31: ಕಾರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಜು.30ರಂದು ಸಂಜೆ ವೇಳೆ ಕಾಳಾವರ ಗ್ರಾಮದ ಶ್ರೀಕಟ್ಟೆ ಭಂಡಾರಿ ದೇವಸ್ಥಾನದ ಹತ್ತಿರ ನಡೆದಿದೆ.

ಮೃತರನ್ನು ನರಸಿಂಹ ಶೆಟ್ಟಿ(65)ಎಂದು ಗುರುತಿಸಲಾಗಿದೆ.

ಕೊಟೇಶ್ವರ ಕಡೆಯಿಂದ ಹಾಲಾಡಿ ಕಡೆಗೆ ಹೋಗುತ್ತಿದ್ದ ಕಾರು, ರಸ್ತೆಯ ಅಂಚಲ್ಲಿ ನಿಂತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯ ಗೊಂಡ ನರಸಿಂಹ ಶೆಟ್ಟಿ ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News