×
Ad

ಸ್ಕೂಟರಿಗೆ ಕಾರು ಢಿಕ್ಕಿ: ಸವಾರ ಮೃತ್ಯು

Update: 2023-08-08 21:23 IST

ಕಾರ್ಕಳ, ಆ.8: ಕಾರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ನಿಟ್ಟೆ ಬೆರ್ಮು ಅಡ್ಯಂತಾಯ ಕ್ರಾಸ್ ಬಳಿ ಆ.7ರಂದು ಸಂಜೆ ವೇಳೆ ನಡೆದಿದೆ.

ಮೃತರನ್ನು ಮಂಜುನಾಥ ಶೆಟ್ಟಿ(62) ಎಂದು ಗುರುತಿಸಲಾಗಿದೆ. ಕಾರ್ಕಳ ಕಡೆಯಿಂದ ನಿಟ್ಟೆ ಕಡೆಗೆ ಹೋಗುತ್ತಿದ್ದ ಕಾರು, ನಿಟ್ಟೆ ಕೆಇಬಿ ಕಛೇರಿ ಕಡೆಗೆ ಸೂಚನೆ ನೀಡಿ ತಿರುಗಿಸಿ ಹೋದ ಸ್ಕೂಟರ್‌ಗೆ ಹಿಂದಿನಿಂದ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಮಂಜು ನಾಥ್ ಶೆಟ್ಟಿ ಮಣಿಪಾಲ ಆಸ್ಪತ್ರೆಗೆ ಕೊಂಡು ಹೋಗುವ ದಾರಿ ಮಧ್ಯೆ ಮೃತ ಪಟ್ಟಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News