ನ.11: ಕಸಾಪದಿಂದ ದತ್ತಿ ಉಪನ್ಯಾಸ
Update: 2023-11-09 19:33 IST
ಉಡುಪಿ, ನ.9: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ, ಡಾ.ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇವುಗಳ ಸಹಯೋಗದಲ್ಲಿ ಪುಳಿಮಾರು ಎಂ. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಹಾಗೂ ಯಕ್ಷಪ್ರೇಮಿ ನಾರಾಯಣ ಸ್ಮಾರಕ ದತ್ತಿ ಪುರಸ್ಕಾರ ಸಮಾರಂಭ ನ.11ರ 10:30ಕ್ಕೆ ಅಜ್ಜರಕಾಡಿನಲ್ಲಿರುವ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಪ್ರಸಿದ್ಧ ಉರಗ ತಜ್ಞ ಗುರುರಾಜ್ ಸನಿಲ್ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಯಕ್ಷಪ್ರೇಮಿ ನಾರಾಯಣ ಸ್ಮರಣಾರ್ಥ ದತ್ತಿ ಪುರಸ್ಕಾರವನ್ನು ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆಗೈದ ನಿರುಪಮಾ ಪ್ರಮೋದ್ ತಂತ್ರಿ ಅವರಿಗೆ ನೀಡಿ ಗೌರವಿಸಲಾಗುವುದು ಎಂದು ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.