×
Ad

ಕಾಂಕ್ರೀಟ್ ಮಾಡಿಕೊಡುವುದಾಗಿ ನಂಬಿಸಿ ಮೋಸ: ಪ್ರಕರಣ ದಾಖಲು

Update: 2023-10-15 20:27 IST

ಮಣಿಪಾಲ, ಅ.15: ಮೇಲ್ಚಾವಣಿ ಕಾಂಕ್ರೀಟ್ ಮಾಡಿ ಕೊಡುವುದಾಗಿ ಹಣ ಪಡೆದು ಮೋಸ ಮಾಡಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

80 ಬಡಗಬೆಟ್ಟು ಗ್ರಾಮದ ಪ್ರಗತಿ ನಗರ ಎಂಬಲ್ಲಿ ಪುಟ್ಟು ನಾಯ್ಕ ಎಂಬಾತ ಮನೆಯ ಮೇಲ್ಚಾವಣಿ ಕಾಂಕ್ರೀಟ್ ಮಾಡಿ ಕೊಡುವುದಾಗಿ 2,15,000ರೂ.ಗೆ ಜು.5ರಂದು ಪ್ರಶಾಂತ್ ನಾಯ್ಕ(45) ಅವರೊಂದಿಗೆ ಒಪ್ಪಂದ ಮಾಡಿಕೊಂಡಿ ದ್ದರು. ಈ ಸಂಬಂಧ ಪ್ರಶಾಂತ್ ಮತ್ತು ಅವರ ಮಿತ್ರ ಎನ್.ರಾಘವ ನಾಯ್ಕ ಒಟ್ಟು 1.25ಲಕ್ಷ ರೂ. ಹಣ ನೀಡಿದ್ದರು.

ಸೆ.4ರಂದು ಮೇಲ್ಚಾವಣಿ ಮಾಡಲು ಪ್ರಾರಂಭಿಸಿ 10 ದಿನಗಳೊಳಗೆ ಮಾಡಿ ಕೊಡುವುದಾಗಿ ಪೊಲೀಸ್ ಠಾಣೆಯಲ್ಲಿ ಲಿಖಿತವಾಗಿ ನೀಡಿದ್ದರು. ಆದರೆ ಪುಟ್ಟು ನಾಯ್ಕ ಮನೆಯ ಮೇಲ್ಚಾವಣಿ ಕಾಂಕ್ರೀಟ್ ಮಾಡಿ ಕೊಡದೇ, ಹಣವನ್ನು ವಾಪಾಸು ನೀಡದೇ ಮೋಸ ಮಾಡಿರುವುದಾಗಿ ದೂರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News