×
Ad

ಉಡುಪಿ ಚಿನ್ನಾಭರಣ ಘಟಕದಲ್ಲಿ ರಾಸಾಯನಿಕ ಹೊಗೆ: ಪರಿಸರ ಅಧಿಕಾರಿಗಳಿಂದ ಪರಿಶೀಲನೆ; ನೋಟೀಸ್ ಜಾರಿ

Update: 2023-07-25 19:24 IST

ಉಡುಪಿ, ಜು.25: ರಾಸಾಯನಿಕ ಹೊಗೆ ಹೊರಸೂಸುವ ವಿಚಾರವಾಗಿ ಇಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಉಡುಪಿ ನಗರದ ಚಿನ್ನಾಭರಣ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನೋಟೀಸ್ ನೀಡಿದ್ದಾರೆ.

ಈ ಘಟಕದ ಸುತ್ತಮುತ್ತ ಅಂಗಡಿ ಮುಗ್ಗಟ್ಟು, ದೇವಾಲಯ, ಮಸೀದಿ, ಸರಕಾರಿ ಶಾಲೆ, ವಸತಿ ಸಮುಚ್ಛಯಗಳಿದ್ದು ಇಲ್ಲಿ ಹೊರ ಸೂಸುವ ರಾಸಾಯನಿಕ ಹೊಗೆಯಿಂದ ಪರಿಸರದಲ್ಲಿ ಭಯದ ವಾತಾವರಣ ಸೃಷ್ಠಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮಾಹಿತಿ ಪಡೆದು ಬೆಳಗ್ಗೆ ಘಟಕಕ್ಕೆ ಆಗಮಿಸಿದ ಅಧಿಕಾರಿಗಳ ತಂಡ ಚಿನ್ನಾಭರಣ ಘಟಕ ತಯಾರಿಸುವ ಹಾಗೂ ಹೊಗೆ ಸೂಸುವ ಅಂತಸ್ತಿಗೆ ಹೋಗಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಪತ್ರಿಕೆ ಜೊತೆ ಮಾತನಾಡಿದ ಮಂಡಳಿಯ ಉಡುಪಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಡಾ.ಕೆ.ಎಂ.ರಾಜು, ನಮ್ಮ ಅಧಿಕಾರಿಗಳು ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿನ್ನ ಇರುವ ಪೇಪರ್ಗಳನ್ನು ಸುಟ್ಟಿರುವುದು ಕಂಡುಬಂದಿದೆ. ಈ ಸಂಬಂಧ ಅವರಿಗೆ ನೋಟೀಸ್ ನೀಡಲಾಗಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News