×
Ad

ಮರವಂತೆ ಬಂದರು ಕಾಮಗಾರಿಗೆ ಸಿಆರ್‌ಝಡ್ ಕ್ಲಿಯರೆನ್ಸ್: ಕೇಂದ್ರ ಸಚಿವರಿಗೆ ಮನವಿ

Update: 2023-08-04 17:03 IST

ಬೈಂದೂರು, ಆ.4: ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಬಂದರು ಮತ್ತು ಮೀನುಗಾರಿಕೆ ಸಚಿವರಾದ ಸರ್ಬಾನಂದ್ ಸೋನುವಾಲ್ ಅವರನ್ನು ಆ.4ರಂದು ಭೇಟಿ ಮಾಡಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯ ಬಹಳಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.

ಮರವಂತೆ ಹೊರ ಬಂದರಿನ ಎರಡನೇ ಹಂತದ ಕಾಮಗಾರಿಗೆ 85 ಕೋಟಿ ರೂ. ಮಂಜೂರಾಗಿದ್ದು, ಸಿ.ಆರ್‌ಝಡ್ ಕ್ಲಿಯರೆನ್ಸ್ ಮಾಡಿ ಆದಷ್ಟು ಬೇಗ ಕಾಮಗಾರಿ ಕೈಗೊಳ್ಳಲು ಅನುಕೂಲ ಕಲ್ಪಿಸಬೇಕು. ಇತ್ತೀಚಿಗೆ ಉಪ್ಪುಂದದಲ್ಲಿ ದೋಣಿ ದುರಂತದಲ್ಲಿ ಇಬ್ಬರು ಮೀನುಗಾರರು ಮೃತಪಟ್ಟ ಸ್ಥಳದಲ್ಲಿ ದೋಣಿಗಳ ಸುರಕ್ಷಿತ ಇಳಿದಾಣಕ್ಕೆ ಬ್ರೇಕ್ ವಾಟರ್ ಹಾಗೂ ಕಿರು ಬಂದರು ಮಂಜೂರು ಮಾಡುವಂತೆ ಮನವಿ ಮಾಡಿದರು.

ಬೈಂದೂರಿನಲ್ಲಿ 228.78ಕೋಟಿ ರೂ. ವೆಚ್ಚದಲ್ಲಿ ಮಲ್ಟಿ ಪರ್ಪಸ್ ಹಾರ್ಬರ್ ನಿರ್ಮಾಣ ಮಾಡಲು ಖಾಸಗಿ ಸಹಭಾಗಿತ್ವ ದಲ್ಲಿ ಟೆಂಡರ್ ಕರೆಯಲಾಗಿತ್ತು, ಆದರೆ ಯಾವುದೇ ಕಂಪನಿ ಸದರಿ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಲಿಲ್ಲ. ಯೋಜನೆಗಳಿಗೆ ಬ್ರೇಕ್‌ವಾಟರ್ ಮತ್ತು ಬರ್ತಿಂಗ್ ಸೌಲಭ್ಯಗಳ ಮೇಲೆ ಹೆಚ್ಚಿನ ಬಂಡವಾಳ ವೆಚ್ಚದ ಅಗತ್ಯವಿರುವುದ ರಿಂದ, ಒಟ್ಟು ಯೋಜನಾ ವೆಚ್ಚಕ್ಕೆ ಪಿಪಿಪಿ ಕಾರ್ಯಸಾಧ್ಯವಾಗುವುದಿಲ್ಲ ಎಂದು ವಿವರಣೆ ನೀಡಿದರು. ಈ ಯೋಜನೆಗೆ 228.78 ಕೋಟಿ ರೂ. ಅವಶ್ಯಕತೆ ಇದ್ದು ಕೇಂದ್ರ ಸರಕಾರ ಖುದ್ದಾಗಿ ಕೈಗೆತ್ತಿ ಕೊಳ್ಳಬೇಕೆಂದು ಅವರು ಸಚಿವರಲ್ಲಿ ವಿನಂತಿಸಿದರು.

ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು ಕೂಡಲೇ ಅನು ಮೋದನೆಯನ್ನು ನೀಡುವುದಾಗಿ ಭರವಸೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News