×
Ad

ಉಡುಪಿ ಸಮಾನ ಮನಸ್ಕರ ಪ್ರತಿಭಟನೆಗೆ ದಸಂಸ ಬೆಂಬಲ

Update: 2023-07-31 19:23 IST

ಉಡುಪಿ, ಜು.31: ಮಣಿಪುರ ಹಿಂಸಾಚಾರ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯನ್ನು ಖಂಡಿಸಿ ಆ.2ರಂದು ಉಡುಪಿಯಲ್ಲಿ ನಡೆಯಲಿರುವ ಪ್ರತಿಭಟನೆ ಮತ್ತು ಕಾಲ್ನಡಿಗೆ ಜಾಥಾಕ್ಕೆ ದಲಿತ ಸಂಘರ್ಷ ಸಮಿತಿ ಉಡುಪಿ ಜಿಲ್ಲೆ ತನ್ನ ಸಂಪೂರ್ಣ ಬೆಂಬಲ ಹಾಗೂ ಸಹಕಾರವನ್ನು ಘೋಷಿಸಿದೆ.

ಜಿಲ್ಲೆಯ ಎಲ್ಲಾ ದಲಿತ ಸಂಘಟನೆಗಳು ಮತ್ತು ದಲಿತ ಸಂಘಟನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹಾಗೂ ಸಮಾನ ಮನಸ್ಕರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ವನ್ನು ಒಕ್ಕೊರಳಿನಿಂದ ಖಂಡಿಸಬೇಕೆಂದು ಉಡುಪಿ ಜಿಲ್ಲೆಯ ಪ್ರಮುಖ ದಲಿತ ಸಂಘಟನೆಗಳ ನಾಯಕರಾದ ಸುಂದರ ಮಾಸ್ತರ್, ಮಂಜುನಾಥ ಗಿಳಿಯಾರು, ಶ್ಯಾಮರಾಜ್ ಬಿರ್ತಿ, ವಾಸುದೇವ ಮುದೂರು, ಪರಮೇಶ್ವರ ಉಪ್ಪೂರು, ಭಾಸ್ಕರ ಮಾಸ್ಟರ್, ಸುರೇಶ ಹಕ್ಲಾಡಿ, ಶ್ಯಾಮಸುಂದರ್ ತೆಕ್ಕಟ್ಟೆ, ಮಂಜುನಾಥ ಬಾಳ್ಕುದ್ರು, ಅಣ್ಣಪ್ಪ ನಕ್ರೆ, ರಾಜು ಬೆಟ್ಟಿನಮನೆ, ಗೀತಾ ಸುರೇಶ್ ಕುಮಾರ್, ಮಂಜುನಾಥ ನಾಗೂರು, ನಾಗರಾಜ ಉಪ್ಪುಂದ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News