ಕಾರ್ಕಳ: ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಿ, ಹಿಂದಿನ ಕಾಲದಲ್ಲಿ ವಿದ್ಯಾರ್ಥಿಗಳು ಸಾಹಿತ್ಯದ ಪುಸ್ತಕಗಳನ್ನು ಓದುತ್ತಿದ್ದರು. ಇದರಿಂದ ವಿದ್ಯಾರ್ಥಿಗಳ ಮಾನಸಿಕ ಬೆಳವಣಿಗೆ ಆಗುತ್ತಿತ್ತು. ಆದರೆ ಇಂದು ವಿದ್ಯಾರ್ಥಿಗಳು ಕೇವಲ ದತ್ತಾಂಶಗಳನ್ನು ನೆನಪಿಡುವ ಕೆಲಸವನ್ನು ಮಾಡುತ್ತಾರೆ. ಸರಕಾರವು ಅತಿಥಿ ಉಪನ್ಯಾಸಕರಿಗೆ ನೀಡುವ ಸಂಬಳ ತುಂಬಾ ಕಡಿಮೆಯಾಗಿದೆ ಎಂದು ಡಾ.ಮಹಾಬಲೇಶ್ವರ ರಾವ್ ಹೇಳಿದರು.

ಕೆಎಮ್‌ಇಎಸ್ ಕುಕ್ಕುಂದೂರು ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಶಿಕ್ಷಕರ ಹುದ್ದೆಯು ವಿದ್ಯಾರ್ಥಿಗಳ ಉತ್ತಮ ಭವಿಷ್ಯವನ್ನು ರೂಪಿಸುವುದರಿಂದ ಶಿಕ್ಷಕರಿಗೆ ವಿದ್ಯಾರ್ಥಿಗಳೇ ಆಸ್ತಿ. ಶಿಕ್ಷಕರ ಹುದ್ದೆಯಲ್ಲಿ ಸಿಗುವ ಗೌರವ ಮತ್ತು ನೆಮ್ಮದಿ ಬೇರೆ ಯಾವುದೇ ಹುದ್ದೆಯಲ್ಲಿ ಸಿಗಲು ಸಾಧ್ಯವಿಲ್ಲ ಎಂದು ಡಾ.ಮಹಾಬಲೇಶ್ವರ ರಾವ್ ಹೇಳಿದರು.

ಜೀವನದಲ್ಲಿ ಉನ್ನತ ಮಟ್ಟಕ್ಕೆ ಏರಲು ಶಿಕ್ಷಣದಿಂದ ಮಾತ್ರ ಸಾಧ್ಯ ಎ೦ದು ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪಾಟ್ಕಾರ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಲೊಲಿಟಾ ಡಿಸಿಲ್ವ ಮಾತನಾಡಿ, ತಾನು ವಿದ್ಯಾರ್ಥಿಯಾಗಿದ್ದಾಗ ಗುರುಗಳಿಂದ ಪಡೆದ ಮಾರ್ಗದರ್ಶನದ ಬಗ್ಗೆ ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ಕೆ.ಬಾಲಕೃಷ್ಣ ರಾವ್ ಮಾತನಾಡಿ, ಮಹಾಬಲೇಶ್ವರ ರಾವ್ ಅವರು ಹೇಗೆ ವಿದಾರ್ಥಿಗಳನ್ನು ಸಾಹಿತ್ಯದ ಕಡೆಗೆ ಕರೆದುಕೊಂಡು ಹೋಗುತ್ತಾರೆ ಎಂಬುದರ ಬಗ್ಗೆ, ಪುಸ್ತಕ ಓದುವ ಒಳ್ಳೆಯ ಅಭ್ಯಾಸವನ್ನು ವಿದ್ಯಾರ್ಥಿಗಳಲ್ಲಿ ಹೇಗೆ ಪ್ರೆರೇಪಿಸುತ್ತಾರೆ ಎಂಬುದರ ಬಗ್ಗೆ ತಮ್ಮ ಅನುಭವವನ್ನು ವ್ಯಕ್ತಪಡಿಸಿದರು.

ಸಂಸ್ಥೆಯ ಅಧ್ಯಕ್ಷರಾದ ಕೆ.ಎಸ್. ಇಮ್ತಿಯಾಝ್‌ ಅಹ್ಮದ್‌ ಮಾತನಾಡಿ, " ಕೆ.ಎಮ್.ಇ.ಎಸ್ ವಿದ್ಯಾ ಸಂಸ್ಥೆ ವಿದ್ಯಾರ್ಥಿಗಳ ಉತ್ತಮ ಭವಿಷ್ಯವನ್ನು ಹೇಗೆ ನಿರ್ಮಿಸುತ್ತದೆ ಎಂಬುದರ ಬಗ್ಗೆ ವಿವರಿಸಿದರು.


ಡಾ.ಮಹಾಬಲೇಶ್ವರ್ ರಾವ್ ಮತ್ತು ಈ ಹಿಂದೆ ಸಂಸ್ಥೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಉಪನ್ಯಾಸಕಿ ಸರಸ್ಪತಿ ಇವರನ್ನು ಶಿಕ್ಷಕ ದಿನಾಚರಣೆಯ ಸಂದರ್ಭ ಸನ್ಮಾಸಿ, ಗೌರವಿಸಲಾಯಿತು.

ಕನ್ನಡ ಉಪನ್ಯಾಸಕಿ ಸಂಗೀತಾ ಮತ್ತು ಶಿಕ್ಷಕಿ ಶುಭ ಅವರು ಸನ್ಮಾನ ಪತ್ರ ಓದಿದರು.

ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಉತ್ಸಾಹದಿಂದ ನಡೆಸಿಕೊಟ್ಟರು. ವಿವಿಧ ಸ್ಫರ್ಧೆಗಳಲ್ಲಿ ಭಾಗವಹಿಸಿದ ಶಿಕ್ಷಕರಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ವಿದ್ಯಾರ್ಥಿಗಳು ವಿವಿಧ ರೀತಿಯ ಮನೋರಂಜನೆಯ ಕಾರ್ಯಕ್ರಮಗಳನ್ನು ನೀಡಿದರು.



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor