ಉಡುಪಿ ಜಿಲ್ಲಾಸ್ಪತ್ರೆಯ ಒಳರೋಗಿಗಳಿಗೆ ಬಟ್ಟಲು ಲೋಟ ವಿತರಣೆ
Update: 2023-08-05 20:16 IST
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಸಂಘದ ಮಾಜಿ ಅಧ್ಯಕ್ಷ ಗೋಕುಲ್ದಾಸ್ ಪೈ ಅವರ ಜನ್ಮದಿನದ ಪ್ರಯುಕ್ತ ಅವರ ಪ್ರಯೋಜಕತ್ವದಲ್ಲಿ ಉಡುಪಿ ಜಿಲ್ಲಾಸ್ಪತ್ರೆಯ ೧೪೦ಕ್ಕೂ ಅಧಿಕ ಒಳರೋಗಿಗಳಿಗೆ ಬಟ್ಟಲು, ಲೋಟಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ.ಸುದೇಶ್ ಕುಮಾರ್, ಗೋಕುಲ್ದಾಸ್ ಪೈ, ಅವರ ಪತ್ನಿ ಪ್ರತಿಮಾ ಪೈ, ಪುತ್ರ ನಾಗೇಂದ್ರ ಪೈ, ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾ ಧಿಕಾರಿ ಉಮೇಶ್ ಮಾರ್ಪಳ್ಳಿ, ಪತ್ರಿಕಾ ಭವನದ ಸಹ ಸಂಚಾಲಕ ಅಂಕಿತ್ ಶೆಟ್ಟಿ, ರಜತ ಮಹೋತ್ಸವ ಸಮಿತಿಯ ಜತೆ ಕಾರ್ಯದರ್ಶಿ ದೀಪಕ್ ಜೈನ್, ಹಿರಿಯ ಪತ್ರಕರ್ತ ಶಶಿಧರ್ ಮಾಸ್ತಿಬೈಲು, ಸಂಘದ ಸದಸ್ಯರಾದ ದಿನೇಶ್ ಕಾಶಿಪಟ್ಣ, ಪ್ರಜ್ವಲ್, ಅಶ್ವಥ್ ಆಚಾರ್ಯ, ಮಹೇಶ್ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.