×
Ad

ಮುಳಿಯ ಪ್ರಶಸ್ತಿಗೆ ಡಾ.ಗಿರಿಜಾ ಶಾಸ್ತ್ರಿ ಆಯ್ಕೆ

Update: 2026-01-09 21:03 IST

ಉಡುಪಿ, ಜ.9: ಕನ್ನಡ ಸಾರಸ್ವತ ಲೋಕದ ಹಿರಿಯ ವಿದ್ವಾಂಸರಾದ ಮುಳಿಯ ತಿಮ್ಮಪ್ಪಯ್ಯ ಅವರ ನೆನಪಿನಲ್ಲಿ ನೀಡಲಾಗುವ ‘ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ’ಗೆ ಈ ಬಾರಿ ಕನ್ನಡದ ಪ್ರಸಿದ್ಧ ಬರಹಗಾರ್ತಿ ಡಾ. ಗಿರಿಜಾ ಶಾಸ್ತ್ರಿ ಆಯ್ಕೆಯಾಗಿದ್ದಾರೆ.

ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಪ್ರಶಸ್ತಿ ಪ್ರದಾನ ನಡೆಯಲಿದೆ. ಪ್ರಶಸ್ತಿಯು 25000 ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜ.17 ರಂದು ಎಂಜಿಎಂ ಕಾಲೇಜಿನಲ್ಲಿ ನಡೆಯಲಿದೆ ಎಂದು ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.

ಡಾ.ಗಿರಿಜಾಶಾಸ್ತ್ರಿ ಅವರು ಮೈಸೂರಿನ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದವರು. ಕನ್ನಡ ಮತ್ತು ಇಂಗ್ಲಿಷ್‌ ನಲ್ಲಿ ಸ್ನಾತಕೋತ್ತರ ಪದವೀಧರೆ ಯಾಗಿದ್ದು, ’ಕನ್ನಡ ಕಥಾ ಸಾಹಿತ್ಯ ಒಂದು ಸ್ತ್ರೀವಾದಿ ಅಧ್ಯಯನ’ ಎಂಬ ಮಹಾ ಪ್ರಬಂಧಕ್ಕೆ ಮುಂಬೈ ವಿಶ್ವವಿದ್ಯಾಲಯದಿಂದ ಪಿಎಚ್.ಡಿ ಪಡೆದಿದ್ದಾರೆ.

ಗಿರಿಜಾಶಾಸ್ತ್ರಿ ಬರಹ ಎಲ್ಲಾ ಪ್ರಕಾರಗಳಲ್ಲಿ ಮೂಡಿದ್ದು, ವಿಶೇಷವಾಗಿ ಕತೆ, ಪ್ರಬಂಧ, ಅನುವಾದ ಕ್ಷೇತ್ರಗಳಿಗೆ ವಿಸ್ತರಿಸಿಕೊಂಡಿವೆ. ಸಂಶೋಧಕರಾಗಿ ಪ್ರಬಂಧಗಳನ್ನು ಇವರು ಬರೆದಿದ್ದಾರೆ. ಕಥಾ ಸಾಹಿತ್ಯ ಒಂದು ಸ್ತ್ರೀವಾದಿ ಅಧ್ಯಯನ, ಮಾನಸಿಯ ಲೋಕ, ವೇಶ್ಯಾ ಸಂಕಥನ ಇವರ ಮುಖ್ಯ ಸಂಶೋಧನಾ ಪ್ರಬಂಧಗಳು.

ಕವನ ಸಂಕಲನಗಳಲ್ಲದೇ ಹಲವಾರು ವಿಮರ್ಶಾ ಲೇಖನಗಳನ್ನು ಬರೆದಿದ್ದಾರೆ. ಸಂಪಾದಕರಾಗಿ, ಅನುವಾದಕ ರಾಗಿ, ವಿಮರ್ಶಕರಾಗಿ ಹಲವಾರು ಕ್ಷೇತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಗಾಗಿ ಇವರಿಗೆ ಹರಿಹರ ಶ್ರೀ ಪ್ರಶಸ್ತಿ, ಸಂಕ್ರಮಣ ಪ್ರಶಸ್ತಿ, ಸುಶೀಲ ಶೆಟ್ಟಿ ಪ್ರಶಸ್ತಿ, ಜಿ.ಎಸ್.ಶಿವರುದ್ರಪ್ಪ ಪ್ರಶಸ್ತಿ, ವಿಶಿಷ್ಟ ಲೇಖಕಿ ಪ್ರಶಸ್ತಿ ಸೇರಿದಂತೆ ಹಲವಾರು ಸಂಮಾನ ಗೌರವಗಳು ಸಂದಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News