×
Ad

ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

Update: 2026-01-05 22:02 IST

ಮಲ್ಪೆ, ಜ.5: ಅಳ ಸಮುದ್ರ ಮೀನುಗಾರಿಕೆ ಮುಗಿಸಿ ವಾಪಾಸ್ಸು ಬರುತ್ತಿದ್ದ ಬೋಟಿನಿಂದ ಮೀನುಗಾರರೊಬ್ಬರು ಅಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಈರಯ್ಯ ನಾರಾಯಣ ನಾಯ್ಕ(55) ಎಂದು ಗುರುತಿಸಲಾಗಿದೆ. ಇವರು ಓಂ ದುರ್ಗಾ ಹೆಸರಿನ ಲೈಲ್ಯಾಂಡ್ ಬೋಟ್‌ನಲ್ಲಿ ಇತರ ಮೀನುಗಾರರೊಂದಿಗೆ ಆಳ ಸಮುದ್ರದಲ್ಲಿ ಮೀನುಗಾರಿಕೆ ತೆರಳಿದ್ದರು. ಜ.3ರಂದು ಮೀನುಗಾರಿಕೆ ಮುಗಿಸಿ ಮಲ್ಪೆ ಬಂದರಿಗೆ ವಾಪಾಸಾಗುತ್ತಿರುವಾಗ ಮಲ್ಪೆ ಬಂದರಿನಿಂದ 16 ಮೈಲು ದೂರದ ಸಮುದ್ರದಲ್ಲಿ ಬೆಳಿಗ್ಗೆ 9:30ರ ಸುಮಾರಿಗೆ ಈರಯ್ಯ ಆಕಸ್ಮಿಕವಾಗಿ ನೀರಿಗೆ ಬಿದ್ದರೆನ್ನಲಾಗಿದೆ. ಜ.4ರಂದು ಬೆಳಗ್ಗೆ ಈರಯ್ಯ ಅವರ ಮೃತದೇಹ ಸಮುದ್ರದಲ್ಲಿ ಪತ್ತೆ ಯಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News