×
Ad

ಕುಂದಾಪುರ ತಾಲೂಕಿನಾದ್ಯಂತ ಭಾರೀ‌ ಮಳೆ; ಜನಜೀವ ಅಸ್ತವ್ಯಸ್ತ

Update: 2025-05-29 12:30 IST

ಕುಂದಾಪುರ: ತಾಲೂಕಿನಾದ್ಯಂತ ಬುಧವಾರ ರಾತ್ರಿಯಿಂದ ಬಿಡದೇ ಸುರಿಯುತ್ತಿರುವ ಮಳೆ ಗುರುವಾರ ಮಧ್ಯಾಹ್ನದವರೆಗೂ ಮುಂದುವರೆದಿದೆ. ನಿರಂತರ ಮಳೆಯಿಂದಾಗಿ ಹಳ್ಳ-ಕೊಳಗಳು ತುಂಬಿ ಹರಿಯುತ್ತಿದ್ದು ವರ್ಷಧಾರೆಯಿಂದ ಜನಜೀವ ಅಸ್ತವ್ಯಸ್ತವಾಗಿದೆ.

ಹೆದ್ದಾರಿಯಲ್ಲಿ ಕೃತಕ ಕೆರೆ: ರಾತ್ರಿಯಿಡೀ ಹಾಗೂ ಮುಂಜಾನೆಯಿಂದ ಸುರಿದ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ಹಾಗೂ ಸರ್ವೀಸ್ ರಸ್ತೆಗಳು ಅಕ್ಷರಶಃ ಕೃತಕ ಕೆರೆಯಾಗಿ ಮಾರ್ಪಟ್ಟು ಸುಗಮ ಸಂಚಾರಕ್ಕೆ ತೊಡಕುಂಟಾಗಿದೆ. ಕೋಟೇಶ್ವರ, ಅಂಕದಕಟ್ಟೆ, ಕುಂದಾಪುರದ ಟಿ.ಟಿ. ರಸ್ತೆ ಮೊದಲಾದೆಡೆ ಸರ್ವೀಸ್ ರಸ್ತೆಗಳಲ್ಲಿ ಮೊಣಕಾಲೆತ್ತರ ನೀರು ನಿಂತಿರುವ ದೃಶ್ಯ ಕಂಡುಬಂತು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News