×
Ad

ಹೆಬ್ರಿ: ಕೆವೈಸಿ ಅಪ್‌ಡೇಟ್ ಹೆಸರಿನಲ್ಲಿ ವಂಚನೆ; ಪ್ರಕರಣ ದಾಖಲು

Update: 2024-11-08 22:02 IST

ಹೆಬ್ರಿ, ನ.8: ಕೆವೈಸಿ ಅಪ್‌ಡೇಟ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಸಾವಿರಾರು ರೂ. ವಂಚಿಸಿರುವ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೇಖರ(77) ಎಂಬವರ ಮೊಬೈಲ್‌ಗೆ ನ.7ರಂದು ಕೆನರಾ ಬ್ಯಾಂಕ್‌ನವರು ಎಂದು ಹೇಳಿ ಕರೆ ಮಾಡಿ, ಕೆವೈಸಿ ಅಪ್‌ಡೇಟ್ ಆಗದೆ ಅಕೌಂಟ್ ಬ್ಲಾಕ್ ಮಾಡುವುದಾಗಿ ತಿಳಿಸಿದ್ದರು. ಬಳಿಕ ಶೇಖರ ಅವರಿಂದ ಖಾತೆ ವಿವರ, ಓಟಿಪಿ ಪಡೆದುಕೊಂಡ ಅಪರಿಚಿತರು, 51,908ರೂ. ಹಣವನ್ನು ಖಾತೆಯಿಂದ ಮೋಸದಿಂದ ಡ್ರಾ ಮಾಡಿ ವಂಚಿಸಿರುವುದಾಗಿ ದೂರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News