×
Ad

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಹಾಯವಾಣಿ ಆರಂಭ

Update: 2025-10-13 20:52 IST

ಉಡುಪಿ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ.22 ರಂದು ಪ್ರಾರಂಭಿಸಿದ್ದು, ಸಮೀಕ್ಷೆ ಕಾರ್ಯ ಪೂರ್ಣಗೊಳ್ಳದ ಕಾರಣ ಸರಕಾರದ ಆದೇಶದಂತೆ ಅ.18ರವರೆಗೆ ಸಮೀಕ್ಷೆ ಕಾರ್ಯವನ್ನು ಮುಂದೂಡಲಾಗಿದೆ.

ಈ ಸಮೀಕ್ಷೆ ಸಮಯದಲ್ಲಿ ಸಮೀಕ್ಷೆದಾರರು ತಮ್ಮ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡದೆ ಬಿಟ್ಟು ಹೋದಲ್ಲಿ ರಾಜ್ಯ ಮಟ್ಟದ ಸಹಾಯವಾಣಿ 8050770004, ಜಿಲ್ಲಾ ಮಟ್ಟದ ಸಹಾಯವಾಣಿ 0820-2574881, ಉಡುಪಿ/ಬ್ರಹ್ಮಾವರ/ ಕಾಪು ಮಟ್ಟದ ಸಹಾಯವಾಣಿ 0820-2520739, ಬೈಂದೂರು/ಕುಂದಾಪುರ:9972294198, ಕಾರ್ಕಳ-ಹೆಬ್ರಿ 08258- 298610 ಸಹಾಯವಾಣಿಗೆ ಕಚೇರಿ ಅವಧಿಯಲ್ಲಿ ಕರೆ ಮಾಡಿದಲ್ಲಿ ಸಮೀಕ್ಷೆದಾರರನ್ನು ಮನೆಗೆ ಕಳುಹಿಸಿ ಸಮೀಕ್ಷೆ ಕಾರ್ಯ ನಡೆಸಲಾಗುವುದು.

ಅಲ್ಲದೇ ಕುಟುಂಬದ ಸದಸ್ಯರು ತಮ್ಮ ಮೊಬೈಲ್/ಲ್ಯಾಪ್‌ಟಾಪ್‌ನಲ್ಲಿ https://kscbcseldeclaration.karnataka.gov.in- ಲಿಂಕ್ ಮೂಲಕ ಸ್ವಯಂ ನೋಂದಣಿಯನ್ನು ಮಾಡಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News