×
Ad

ಉಡುಪಿ: ಯುಪಿಎಂಸಿ ಸಾಹಿತ್ಯ ಸಂಘ ಉದ್ಘಾಟನೆ

Update: 2025-11-28 00:04 IST

ಉಡುಪಿ: ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ ಪರಿಣಾಮಕಾರಿ ಸಂವಹನ ಕಲೆಯ ಕುರಿತ ವಿಶೇಷ ತರಬೇತಿ ಕಾರ್ಯಕ್ರಮ ಕಾಲೇಜಿನ ಉಪೇಂದ್ರ ಮಂಟಪದಲ್ಲಿ ಇತ್ತೀಚೆಗೆ ಜರಗಿತು.

ಮುಖ್ಯ ಅತಿಥಿಯಾಗಿ ವ್ಯಕ್ತಿತ್ವ ವಿಕಸನ ತರಬೇತಿದಾರ, ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು, 2025- 26ನೇ ಸಾಲಿನ ಸಾಹಿತ್ಯ ಸಂಘದ ಚಟುವಟಿಕೆಗಳನ್ನು ಉದ್ಘಾಟಿಸಿ, ಪರಿಣಾಮಕಾರಿ ಸಂವಹನ ಕಲೆಯ ಕುರಿತಾಗಿ ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು.

ವಿದ್ಯಾರ್ಥಿಗಳಿಗೆ ಮಾತಿನಲ್ಲಿ ಅಥವಾ ಬರವಣಿಗೆಯಲ್ಲಿ ನಿಖರತೆ, ಸ್ಪಷ್ಟತೆ, ವಸ್ತುನಿಷ್ಠತೆ ಇರಬೇಕು. ಇದು ಸಂವಹನ ಕೌಶಲ ಉತ್ತಮ ಪಡಿಸಿಕೊಳ್ಳಲು ಸಹಕಾರಿ, ಲವಲವಿಕೆಯಿಂದ ವಿವಿಧ ಕ್ಷೇತ್ರಗಳಲ್ಲಿ ಆಸಕ್ತಿಯಿಂದ ತೊಡಗಿದರೆ ವ್ಯಕ್ತಿ ಸಾಧಕನಾಗಬಲ್ಲ, ತಾಳ್ಮೆಯಿಂದ ಉತ್ತಮ ಕೇಳುಗನಾದರೆ ವ್ಯಕ್ತಿಯ ವ್ಯಕ್ತಿತ್ವ ಹಾಗೂ ಪ್ರತಿಭೆ ಅರಳುವುದರ ಜೊತೆಗೆ ಸೃಜನಶೀಲತೆ ಜಾಗೃತಗೊಳ್ಳಲು ಸಹಕಾರಿಯಾಗಲಿದೆ. ಹಾಗೆಯೇ ಲೇಖನ, ಕವನ ಬರೆಯಲು ಸಮಕಾಲೀನ ಪರಿಸ್ಥಿತಿಗಳನ್ನು ವಸ್ತುವಾಗಿಸಿ ಬರೆಯಲು ಸಾಧ್ಯವಿದೆ, ಎಲ್ಲವುದಕ್ಕೂ ಆಸಕ್ತಿ ಮುಖ್ಯ ಎಂದು ಅವರು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲೆ ಆಶಾ ಕುಮಾರಿ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಸಂಘದ ಸಹ ಸಂಚಾಲಕ ಹಾಗೂ ಕನ್ನಡ ಉಪನ್ಯಾಸಕ ಶಶಿಕಾಂತ್ ಎಸ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿಂದಿ ಉಪನ್ಯಾಸಕಿ ಸುನಿತಾ ಕಾಮತ್ ಉಪಸ್ಥಿತರಿದ್ದರು. ಸಾಹಿತ್ಯ ಸಂಘದ ಸಂಚಾಲಕ ಹಾಗೂ ವಾಣಿಜ್ಯ ಉಪನ್ಯಾಸಕ ರಾಘವೇಂದ್ರ ಜಿ.ಜಿ. ಕಾರ್ಯಕ್ರಮ ಸಂಯೋಜಿಸಿದರು. ವಿದ್ಯಾರ್ಥಿನಿಯರಾದ ಅದೀಶ ಸ್ವಾಗತಿಸಿದರು, ಕೃತಿಕಾ ವಂದಿಸಿದರು, ಸನ್ನಿಧಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News