×
Ad

ಪತ್ರಕರ್ತ ಪ್ರಕಾಶ ಸುವರ್ಣರ ’ಪಂಜುರ್ಲಿ’ ಕೃತಿ ಬಿಡುಗಡೆ

Update: 2026-01-06 19:12 IST

ಉಡುಪಿ, ಜ.6: ಮಂಗಳೂರಿನ ಕಥಾಬಿಂದು ಪ್ರಕಾಶನದ ವತಿಯಿಂದ ಪಾಣೆಮಂಗಳೂರು ಭಯಂಕೇಶ್ವರ ದೇವಸ್ಥಾನದಲ್ಲಿ ನಡೆದ ಕಥಾಬಿಂದು ಸಾಹಿತ್ಯ ಸಂಭ್ರಮ-2026 ಕಾರ್ಯಕ್ರಮದಲ್ಲಿ ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿ ಬರೆದಿರುವ ’ಪಂಜುರ್ಲಿ’ ಕೃತಿಯನ್ನು ಬಿಡುಗಡೆ ಮಾಡಲಾಯಿತು.

ಅಧ್ಯಕ್ಷತೆ ವಹಿಸಿದ್ದ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಕೃತಿಯನ್ನು ಬಿಡುಗಡೆ ಗೊಳಿಸಿದರು. ತುಳುನಾಡಿನ ಪ್ರಾಚೀನ ದೈವ ಪಂಜುರ್ಲಿಯ ಕುರಿತು ಪ್ರಕಾಶ ಸುವರ್ಣ ಕಟಪಾಡಿ ಅಧ್ಯಯನ ನಡೆಸಿ ಬರೆದಿರುವ ಪಂಜುರ್ಲಿ ಕೃತಿ ಮೌಲ್ಯಯುತವಾಗಿದ್ದು, ಈ ಕೃತಿ ಯುವಪೀಳಿಗೆಗೆ ದೈವಾರಾಧನೆಯ ಕುರಿತು ಸ್ಪಷ್ಟ ಚಿತ್ರಣ ನೀಡಲಿದೆ ಎಂದರು.

ಭಯಂಕೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ್ಷ ಬಿ.ರಘುನಾಥ್ ಸೋಮಯಾಜಿ, ಮೂಡುಬಿದ್ರಿ ಉದ್ಯಮಿ ಶ್ರೀಪತಿ ಭಟ್, ಹಿರಿಯ ಸಾಹಿತಿ ಡಾ.ಕೊಳ್ಚಪ್ಪೆ ಗೋವಿಂದ ಭಟ್, ತೇವು ತಾರನಾಥ ಕೊಟ್ಟಾರಿ, ಬಂಟ್ವಾಳ ತಾಲೂಕು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ರವೀಂದ್ರ ಕುಕ್ಕಾಜೆ, ಜಯಾನಂದ ಪೆರಾಜೆ, ಡಾ.ಶಾಂತಾ ಪುತ್ತೂರು, ಡಾ.ಜೋಸೆಫ್ ಲೋಬೊ ಶಂಕರಪುರ, ರಕ್ತದಾನಿ ಮಂಜು ಮೈಸೂರು, ನೀಮಾ ಲೋಬೊ, ಪದ್ಮನಾಭ ಆರ್.ಕೋಟ್ಯಾನ್, ದೇವಕಿ ಮಣಿಪಾಲ ಮತ್ತಿತರರು ಉಪಸ್ಥಿತರಿದ್ದರು.

ಮಂಗಳೂರಿನ ಕಥಾಬಿಂದು ಪ್ರಕಾಶನದ ಮುಖ್ಯಸ್ಥ ಪಿ..ಪ್ರದೀಪ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುರುಷೋತ್ತಮ ಕೊಟ್ಟಾರಿ ಸ್ವಾಗತಿಸಿದರು. ಶೋಭಾ ದಿನೇಶ್ ಉದ್ಯಾವರ ಮತ್ತು ಸನ್ಮತಿ ಇಂದ್ರ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News