×
Ad

ಕಾರ್ಕಳ | ಅರುಣೋದಯ ವಿಶೇಷ ಶಾಲೆಗೆ ಪ್ರಶಸ್ತಿ

Update: 2025-11-25 20:55 IST

ಕಾರ್ಕಳ : ಮಂಗಳೂರು ವಿಶ್ವವಿದ್ಯಾಲಯ, ಯುವಜನ ಕ್ರೀಡಾ ಇಲಾಖೆ, ಜಿ.ಪ. ಉಡುಪಿ, ಡಾ.ಜಿ ಶಂಕರ್ ಸರಕಾರಿ ಮಹಿಳಾ ಕಾಲೇಜು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇವರ ಸಹಯೋಗದಲ್ಲಿ ಉಡುಪಿ ಅಜ್ಜರಕಾಡು ಸ್ಟೇಡಿಯಂನಲ್ಲಿ ನಡೆದ ಕ್ರೀಡಾ ಕೂಟದಲ್ಲಿ ಕಾರ್ಕಳ ಅರುಣೋದಯ ವಿಶೇಷ ಶಾಲಾ ಮಕ್ಕಳು ಭಾಗವಹಿಸಿ ಐದು ಚಿನ್ನದ ಪದಕ, ನಾಲ್ಕು ಬೆಳ್ಳಿಯ ಪದಕ, ಆರು ಕಂಚಿನ ಪದಕಗಳನ್ನು ಪಡೆದಿರುತ್ತಾರೆ.

ಸಮಾರಂಭದಲ್ಲಿ ಶಾಸಕ ಯಶ್ ಪಾಲ್ ಸುವರ್ಣ .ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಬಸ್ರುರು ರಾಜೀವ್ ಶೆಟ್ಟಿ ನಿರ್ದೇಶನಾಲಯದ ಯೋಜನಾ ನಿರ್ದೇಶಕರು ಅಲೀಮಾ, ಗಿರೀಶ್ ಶೆಟ್ಟಿ ತೆಲ್ಲಾರ್ ಉಪಸ್ಥಿತರಿದ್ದರು.

ಅರುಣೋದಯ ವಿಶೇಷ ಶಾಲೆಯು ಸಲ್ಲಿಸಿದ ಸೇವೆಯನ್ನು ಗುರುತಿಸಿ ಶಾಲಾ ಆಡಳಿತ ಮಂಡಳಿಯ ಮ್ಯಾನೇಜಿಂಗ್ ಟ್ರಸ್ಟಿಯಾದ ಶ್ಜೆಸಿಂತಾ ಡಿಮೆಲ್ಲೋ ರವರನ್ನು ಸನ್ಮಾನಿಸಲಾಯಿತು.



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News