×
Ad

ಕುಂದಾಪುರ: ದನಗಳಿಗೆ ಬುಲೆಟ್ ಢಿಕ್ಕಿ: ಸವಾರ ಮೃತ್ಯು

Update: 2023-08-02 14:36 IST

(ಸಾಂದರ್ಭಿಕ ಚಿತ್ರ) Photo: PTI

ಕುಂದಾಪುರ, ಆ.2: ರಸ್ತೆಗೆ ಅಡ್ಡ ಬಂದ ದನದಳಿಗೆ ಢಿಕ್ಕಿ ಹೊಡೆದ ಪರಿಣಾಮ ಬುಲೆಟ್ ಸವಾರೊಬ್ಬರು ಮೃತಪಟ್ಟ ಘಟನೆ ಕಾವ್ರಾಡಿ ಗ್ರಾಮದ ದೂಪದಕಟ್ಟೆ ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತರನ್ನು ಪ್ರದೀಪ ಶೆಟ್ಟಿ (28) ಎಂದು ಗುರುತಿಸಲಾಗಿದೆ. ಜು.30ರಂದು ರಾತ್ರಿ ವೇಳೆ ಕಂಡ್ಲೂರು ಕಡೆಯಿಂದ ವಾಲ್ತೂರು ಅರಾರಿ ಕಡೆಗೆ ಹೋಗುತ್ತಿದ್ದಾಗ, ರಸ್ತೆಗೆ ಅಡ್ಡ ಬಂದ ಎರಡು ದನಗಳಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಪ್ರದೀಪ ಶೆಟ್ಟಿಯನ್ನು ಮಣಿಪಾಲ ಆಸ್ಪತ್ರೆಗೆ ದಾಆಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟರು ಎಂದು ತಿಳಿದು ಬಂದಿದೆ.

ಅಪಘಾತದಿಂದ ಒಂದು ದನ ಗಾಯಗೊಂಡಿದ್ದು ಇನ್ನೊಂದು ದನ ಸ್ಥಳದಲ್ಲಿಯೇ ಮೃತಪಟ್ಟಿದೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News