×
Ad

ಕುಂದಾಪುರ: ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ದೇವಳದ ಕೆರೆಗೆ ಹಾರಿ ಆತ್ಮಹತ್ಯೆ

Update: 2023-11-06 11:28 IST

ಕುಂದಾಪುರ, ನ.6: ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು, ಕೋಟೇಶ್ವರದ ಶ್ರೀಕೋಟಿಲಿಂಗೇಶ್ವರ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.

ಮೃತರನ್ನು ಕೋಟ ಹೀರೆ ಶ್ರೀಮಹಾಲಿಂಗೇಶ್ವರ ದೇವಳದ ಸಮೀಪದ ನಿವಾಸಿ ಜಿ.ಸುರೇಂದ್ರ(70) ಎಂದು ಗುರುತಿಸಲಾಗಿದೆ. ಇವರು ಅನಾರೋಗ್ಯದಿಂದ ನ.2ರಂದು ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದರು. ನ.5ರಂದು ಬೆಳಗ್ಗೆ ಇವರು ಆಸ್ಪತ್ರೆಯಿಂದ ನಾಪತ್ತೆಯಾಗಿದ್ದರು.

ಎಲ್ಲ ಕಡೆ ಹುಡುಕಾಡಿದರೂ ಅವರ ಪತ್ತೆಯಾಗಿರಲಿಲ್ಲ. ನ.5ರಂದು ಸಂಜೆ 5:45ರ ಸುಮಾರಿಗೆ ಕೋಟೇಶ್ವರ ಕೆರೆಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ಇವರು ವೈಯಕ್ತಿಕ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು  ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News