ಲಾರಿ ಡಿಕ್ಕಿ: ಸ್ಕೂಟಿ ಸವಾರ ಮೃತ್ಯು
Update: 2026-07-24 21:39 IST
ಬೈಂದೂರು, ಜು.24: ಲಾರಿಯೊಂದು ಡಿಕ್ಕಿಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ವ್ಯಕ್ತಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಜು.23ರಂದು ಅಪರಾಹ್ನ ನಡೆದಿದೆ.
ಕಳವಾಡಿ ನಿವಾಸಿ ಸುಧಾಕರ ಶೆಟ್ಟಿ (78) ಮೃತರು. ಲಾರಿ ಚಾಲಕನ ಅತೀವೇಗ ಮತ್ತು ಅಜಾಗರೂಕತೆಯ ಚಾಲನೆಯಿಂದ ಈ ಅಪಘಾತ ನಡೆದಿದೆ ಎಂದು ವರದಿಯಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.