×
Ad

ವ್ಯಾಪಾರದಲ್ಲಿ ನಷ್ಟ: ಮರದ ವ್ಯಾಪಾರಿ ಆತ್ಮಹತ್ಯೆ

Update: 2023-10-24 21:21 IST

ಹಿರಿಯಡ್ಕ, ಅ.24: ವ್ಯಾಪಾರದಲ್ಲಿ ಉಂಟಾದ ನಷ್ಟದಿಂದ ಮನನೊಂದ ಯುವ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.22ರಂದು ರಾತ್ರಿ ಕುಕ್ಕೆಹಳ್ಳಿ ಎಂಬಲ್ಲಿ ನಡೆದಿದೆ.

ಮೃತರನ್ನು ಮರದ ವ್ಯಾಪಾರಿ ರಾಜೇಶ್(24) ಎಂದು ಗುರುತಿಸಲಾಗಿದೆ. ಇವರು ಇತ್ತಿಚೆಗೆ ಮರದ ವ್ಯಾಪಾರದಲ್ಲಿ ನಷ್ಟ ಉಂಟಾಗಿದ್ದು ಇದೇ ವಿಚಾರದಲ್ಲಿ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News