×
Ad

ಮಜೂರು: ನೂತನ ಕಿಂಡಿ ಅಣೆಕಟ್ಟು ಉದ್ಘಾಟನೆ

Update: 2023-11-07 16:00 IST

ಕಾಪು, ನ.7: ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳಿಯಾರು ಬಳಿಯ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಕಿಂಡಿ ಅಣೆಕಟ್ಟನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇಂದು ಉದ್ಘಾಟಿಸಿದರು.

ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಶಿಫಾರಸ್ಸಿನ ಮೇರೆಗೆ ಸಣ್ಣ ನೀರಾವರಿ ಇಲಾಖೆಯಿಂದ ಮಂಜೂರಾದ 1 ಕೋಟಿ 5 ಲಕ್ಷ ರೂ. ಅನುದಾನ ದಲ್ಲಿ ಈ ಕಾಮಗಾರಿ ನಡೆಸಲಾಗಿದೆ.

ಈ ಸಂದರ್ಭದಲ್ಲಿ ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಮಜೂರು ಗ್ರಾಪಂ ಅಧ್ಯಕ್ಷ ಪ್ರಸಾದ್ ಶೆಟ್ಟಿ, ಉಪಾಧ್ಯಕ್ಷೆ ಮಂಜುಳಾ, ಇನ್ನಂಜೆ ಗ್ರಾಪಂ ಅಧ್ಯಕ್ಷರಾದ ಮಾಲಿನಿ, ಉಪಾಧ್ಯಕ್ಷೆ ಸುರೇಖಾ ಶೆಟ್ಟಿ, ಸಣ್ಣ ನೀರಾವರಿ ಇಲಾಖೆ ಸಹಾಯಕ ಅಭಿಯಂತರ ಮಮತಾ, ಮಜೂರು ಹಾಗೂ ಇನ್ನಂಜೆ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಮಜೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News