ಮಲ್ಪೆ ಮಹಾಲಕ್ಷ್ಮಿ ಬ್ಯಾಂಕ್ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕೊನೆ ಕ್ಷಣದಲ್ಲಿ ಆಣೆ ಪ್ರಮಾಣ ರದ್ದು; ವಿಶೇಷ ಪ್ರಾರ್ಥನೆ ಸಲ್ಲಿಕೆ
Update: 2024-11-09 11:59 IST
ಉಡುಪಿ: ಮಲ್ಪೆ ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿ ಕರಂಬಳ್ಳಿ ದೇವಾಲಯದಲ್ಲಿ ಇಂದು ನಿಗದಿಯಾಗಿದ್ದ ಆಣೆ ಪ್ರಮಾಣ ಕೊನೆ ಕ್ಷಣದಲ್ಲಿ ರದ್ದಾಗಿದೆ. ಅದರ ಬದಲು ಸಂತ್ರಸ್ತರು ಹಾಗೂ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಮಾಜಿ ಶಾಸಕ ರಘುಪತಿ ಭಟ್ ಸಮ್ಮುಖದಲ್ಲಿ ನೂರಾರು ಸಂತ್ರಸ್ತರು ಪ್ರಾರ್ಥನೆ ಸಲ್ಲಿಸಿದರೆ, ಬ್ಯಾಂಕಿನ ಪರವಾಗಿ ಪ್ರಧಾನ ವ್ಯವಸ್ಥಾಪಕ ಶರತ್ ಕುಮಾರ್ ಶೆಟ್ಟಿ ತಮ್ಮ ಸಿಬ್ಬಂದಿಗಳೊಂದಿಗೆ ಪ್ರಾರ್ಥನೆಯನ್ನು ಸಲ್ಲಿಸಿದರು.