ರೈಲ್ವೆ ಸೇತುವೆಯಿಂದ ಹಾರಿ ವ್ಯಕ್ತಿ ಆತ್ಮಹತ್ಯೆ
Update: 2026-01-24 20:37 IST
ಕೋಟ, ಜ.24: ರೈಲ್ವೆ ಸೇತುವೆ ಮೇಲಿನಿಂದ ಕೆಳಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.23ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಕೆದೂರು ಗ್ರಾಮದ ಪ್ರತಾಪ ನಗರದ ಅಣ್ಣಪ್ಪ(55) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಇವರು ಮದ್ಯ ಸೇವನೆ ಚಟದಿಂದ ಮಾನಸಿಕವಾಗಿ ಅಸ್ವಸ್ಥಗೊಂಡಿದ್ದರು. ಇದೇ ಚಿಂತೆಯಲ್ಲಿ ಅವರು ರೈಲ್ವೆ ಸೇತುವೆಯ ಮೇಲಿನಿಂದ ರೈಲ್ವೇ ಟ್ರಾಕ್ಗೆ ಹಾರಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.