×
Ad

ಮಟ್ಕಾ ದಂಧೆ: ಐವರು ವಶಕ್ಕೆ

Update: 2023-08-22 21:23 IST

ಉಡುಪಿ, ಆ.22: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಟ್ಕಾ ದಂಧೆಗೆ ದಾಳಿ ನಡೆಸಿರುವ ಪೊಲೀಸರು ಐದು ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಸಾರ್ವಜನಿಕ ಪಾರ್ಕಿಂಗ್ ಸ್ಥಳದಲ್ಲಿ ಕೊಲ್ಲೂರಿನ ಪ್ರಮೋದ ಎಸ್.(22), ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪುಂದ ಆಟೋ ನಿಲ್ದಾಣದ ಬಳಿ ಪಡು ವರಿಯ ಮಂಜುನಾಥ(32), ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಕೂರು ಗ್ರಾಮದ ಬಿ.ಹೆಚ್. ಜಂಕ್ಷನ್ ಬಳಿ ಕೋಟೇಶ್ವರ ಬಡಾಕೇರೆಯ ವಿಘ್ನೇಶ(28), ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ತಲ್ಲೂರು ಗ್ರಾಮದ ಪ್ರವಾಸಿ ಹೋಟೆಲ್ ಬಳಿ ಆಲೂರಿನ ಭಾಸ್ಕರ ಪೂಜಾರಿ(55), ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಬಸ್ ನಿಲ್ದಾಣದ ಬಳಿ ಸ್ಥಳೀಯ ನಿವಾಸಿ ಲೊಕೇಶ(38) ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News