×
Ad

ಮುಖ್ಯಮಂತ್ರಿ ಡಿಕೆಶಿ ಭೇಟಿಯಾದ ಸಂಸದ ಕೋಟ: ಕೊಂಕಣ ರೈಲ್ವೆ ವಿಲೀನಕ್ಕೆ ರಾಜ್ಯ ಸರಕಾರದ ನೆರವು ಕೋರಿಕೆ

Update: 2026-07-14 20:15 IST

ಉಡುಪಿ: ಕಳೆದ ಸುಮಾರು 30 ವರ್ಷಗಳಿಂದ ಹೆಚ್ಚಿನ ಅಭಿವೃದ್ಧಿ ಕಾಣದೆ ಏಕಪಥ ಹಳಿಗಳ ಮೂಲಕ ಸಂಚರಿಸುತ್ತಿ ರುವ ಕೊಂಕಣ ರೈಲ್ವೆಯನ್ನು ಇನ್ನಷ್ಟು ಆಧುನೀಕರಣಗೊಳಿಸಿ ಅಭಿವೃದ್ಧಿ ಪಡಿಸಲು ಅನುಕೂಲವಾಗುವಂತೆ ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ರಾಜ್ಯ ಸರಕಾರದ ಬೆಂಬಲ, ನೆರವು ಕೋರಲು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಸದ್ಯ ಕೊಂಕಣ ರೈಲ್ವೆಯ ಸೇವೆ ಕರಾವಳಿ ಜಿಲ್ಲೆಯ ಜನತೆಗೆ ಸೀಮಿತ ವಾಗಿದೆ. ಕೇಂದ್ರ ಸರಕಾರ ಕೊಂಕಣ ರೈಲ್ವೆ ಪ್ರದೇಶವನ್ನು ಅಭಿವೃದ್ಧಿ ಪಡಿಸಲು ಮತ್ತು ರೈಲ್ವೆ ಹಳಿಗಳನ್ನು ದ್ವಿಪಥಗೊಳಿಸಿ ಮೂಲಭೂತ ಸೌಕರ್ಯ ಅಭಿವೃದ್ಧಿ ಪಡಿಸಲು ಕೊಂಕಣ ರೈಲ್ವೆ ನಿಗಮವನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸುವ ಪ್ರಕ್ರಿಯೆ ನಡೆಯುವುದು ತುಂಬಾ ಅಗತ್ಯವಿದೆ ಎಂದು ಕೋಟ ಅವರು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದರು.

ಕರಾವಳಿಯ ಹಿರಿಯ ಮುತ್ಸದ್ದಿ ಜಾರ್ಜ್ ಫೆರ್ನಾಂಡಿಸ್ ಕೊಂಕಣ ರೈಲ್ವೆ ಯನ್ನು ಕರಾವಳಿ ಜನತೆಗೆ ಸಮರ್ಪಿಸು ವಾಗ ಮಾಡಿಕೊಂಡ ವ್ಯವಸ್ಥೆಯಂತೆ ಕೆಲವು ರಾಜ್ಯಗಳು ಪಾಲು ಬಂಡವಾಳವನ್ನು (ಶೇರ್) ತ್ಯಜಿಸಬೇಕಾಗಿದೆ. ಕೇರಳ ಮತ್ತು ಗೋವಾ ರಾಜ್ಯಗಳು ಈಗಾಗಲೇ ತಮ್ಮ ಪಾಲಿನ ಶೇರ್‌ಗಳನ್ನು ತ್ಯಜಿಸಿದ್ದು, ಕರ್ನಾಟಕ ಸರಕಾರವೂ ಕೊಂಕಣ ರೈಲ್ವೆಯ ಅಭಿವೃದ್ಧಿಗಾಗಿ ಸಹಕಾರ ನೀಡಬೇಕೆಂದು ಸಂಸದ ಕೋಟ ಮನವಿ ಸಲ್ಲಿಸಿ, ರಾಜ್ಯ ಸರಕಾರದ ನೆರವು ಕೋರಿದರು.

ಕರಾವಳಿ ಭಾಗದ ಸಂಸದರಾದ ಬ್ರಿಜೇಶ್ ಚೌಟ ಮತ್ತು ವಿಶ್ವೇಶ್ವರ ಹೆಗ್ಡೆ ಕಾಗೇರಿ ಅವರು ಸಹ ಇದೇ ಅಭಿಪ್ರಾಯ ಹೊಂದಿದ್ದು, ಕೇಂದ್ರ ಸರ್ಕಾರದ ಮೂಲಕ ಕೊಂಕಣ ರೈಲ್ವೆಯ ಅಭಿವೃದ್ಧಿ ನಮ್ಮ ಗುರಿಯಾಗಿದೆ ಎಂದು ಸಂಸದ ಕೋಟ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದರು.

ಸಂಸದರೊಂದಿಗೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಸಹ ಉಪಸ್ಥಿತರಿದ್ದು, ತಮ್ಮ ಅನುಭವದ ಮಾಹಿತಿ ಒದಗಿಸಿದರು. ಸಂಸದ ಮತ್ತು ಶಾಸಕರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ ಮುಖ್ಯಮಂತ್ರಿ ಡಿ.ಕೆ.ಶಿ. ಕೊಂಕಣ ರೈಲ್ವೆಯ ಅಭಿವೃದ್ಧಿಗಾಗಿ ಸಂಸದರ ಪ್ರಯತ್ನಕ್ಕೆ ತಮ್ಮ ಪೂರ್ಣ ಸಹಕಾರ ನೀಡುವುದಾಗಿ ಭರವಸೆ ಇತ್ತರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News