×
Ad

ಶಾಲೆಗೆ ಸೇರಿಸುವಾಗ ಮಾತೃ ಭಾಷೆ ತುಳು ಎಂದು ನಮೂದಿಸಿ: ಜಯಕರ್ ಶೆಟ್ಟಿ ಇಂದ್ರಾಳಿ

Update: 2023-11-26 17:56 IST

ಉಡುಪಿ : ಉಸಿರು ನಿಂತರೂ ಹೆಸರು ಉಳಿಸಿಸುವ ಕಾರ್ಯಕ್ರಮ ವನ್ನು ನಿರಂತರ ತುಳುಕೂಟ ಮಾಡುತ್ತಿದೆ. ಒಳ್ಳೆಯ ಕೆಲಸ ಮಾಡಿದವರ ಹೆಸರು ಅಜರಾಮರವಾಗಿರಬೇಕು. ಶಾಲೆಗೆ ಸೇರಿಸುವಾಗ ಮಾತೃ ಭಾಷೆ ತುಳು ಎಂದು ನಮೂದಿಸ ಬೇಕು. ಹತ್ತು ವರ್ಷಗಳ ಬಳಿಕ ತುಳು ಕೋಟಾದಲ್ಲಿ ಸೀಟು ಸಿಗುವಂತಾಗಬೇಕು ಎಂದು ತುಳುಕೂಟದ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಹೇಳಿದ್ದಾರೆ.

ಉಡುಪಿ ತುಳುಕೂಟ, ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಉಡುಪಿ ಕ್ರಿಶ್ಚಿಯನ್ ಹೈಸ್ಕೂಲ್‌ ನಲ್ಲಿ ರವಿವಾರ ಆಯೋಜಿಸಲಾದ ದಿ.ನಿಟ್ಟೂರು ಸಂಜೀವ ಭಂಡಾರಿ ಸ್ಮರಣಾರ್ಥ ತುಳು ಭಾವಗೀತೆ ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಮಾತನಾಡಿ, ಭಾವಗೀತೆಯಲ್ಲಿ ಭಾವನಾತ್ಮಕ ಸಂಬಂಧವಿದೆ. ತಂತಜ್ಞಾನದೊಂದಿಗೆ ನಮ್ಮತನವನ್ನು ಬಿಟ್ಟುಕೊಡಬಾರದು ಎಂದು ಅಭಿಪ್ರಾಯ ಪಟ್ಟರು.

ಸ್ಪರ್ಧೆಗೆ ಸುಗಮ ಸಂಗೀತ ಕಲಾವಿದ ಬಿ.ಕೆ.ಕಾರಂತ್ ಜ್ಯೋತಿ ಬೆಳಗಿಸಿ ಭಾವಗೀತೆ ಹಾಡುವ ಮೂಲಕ ಚಾಲನೆ ನೀಡಿ ದರು. ಬಾಲಪ್ರತಿಭೆ ರೀತುಶ್ರೀ ಅವರನ್ನು ಅಭಿನಂದಿಸಲಾಯಿತು. ಕಾರ್ಯದರ್ಶಿ ಗಂಗಾಧರ್ ಕಿದಿಯೂರು, ಮನೋರಮಾ ಶೆಟ್ಟಿ, ಭುವನ ಪ್ರಸಾದ್ ಹೆಗ್ಡೆ ಉಪಸ್ಥಿತರಿದ್ದರು.

ತುಳು ಭಾವಗೀತೆ ಸ್ಪರ್ಧೆಯ ಸಂಚಾಲಕ ಜಯರಾಂ ಸ್ವಾಗತಿಸಿ, ಪ್ರಾಸ್ತಾವಿಕ ವಾಗಿ ಮಾತನಾಡಿದರು. ವಿದ್ಯಾ ಸರಸ್ವತಿ ಕಾರ್ಯಕ್ರಮ ನಿರೂಪಿಸಿದರು. ಪ್ರಭಾಕರ್ ಭಂಡಾರಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News