ದತ್ತ ಜಯಂತಿ: ಲಘ ವಾಹನ ಬಳಕೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಸೂಚನೆ
Update: 2023-12-15 21:23 IST
ಉಡುಪಿ, ಡಿ.15: ಚಿಕ್ಕಮಗಳೂರು ಜಿಲ್ಲೆಯಲ್ಲಿ ಡಿ.24ರಿಂದ 26ರ ವರೆಗೆ ನಡೆಯಲಿರುವ ದತ್ತಜಯಂತಿ ಕಾರ್ಯಕ್ರಮದ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಭಕ್ತಾದಿಗಳು ಮತ್ತು ಸಾರ್ವಜನಿಕರ ಸುರಕ್ಷತೆ ಹಾಗೂ ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಕಾರ್ಯಕ್ರಮಕ್ಕೆ ಇಲ್ಲಿಂದ ಹೋಗಲಿರುವ ಭಕ್ತಾದಿಗಳು ಮತ್ತು ಸಾರ್ವಜನಿಕರು ಭಾರಿ ವಾಹನಗಳ ಬದಲಿಗೆ ಲಘ ವಾಹನಗಳಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿಯ ಪ್ರಕಟನೆಯಲ್ಲಿ ತಿಳಿಸಲಾಗಿದೆ.