×
Ad

ಕಾಪು: ಕಿಶೋರ ಯಕ್ಷಗಾನ ಸಮಾರೋಪ

Update: 2023-12-25 20:28 IST

ಕಾಪು, ಡಿ.25: ಕಾಪುವಿನ ಬಂಟರ ಸಂಘದ ಎದುರು ನಿರ್ಮಿಸಿದ ಕಾಪು ಲೀಲಾಧರ ಶೆಟ್ಟಿ ವೇದಿಕೆಯಲ್ಲಿ ಜರಗಿದ ಯಕ್ಷ ಶಿಕ್ಷಣ ಟ್ರಸ್ಟ್‌ನ ಕಾಪು ಭಾಗದ ಏಳು ಶಾಲೆಗಳ ಕಿಶೋರ ಯಕ್ಷಗಾನ ಪ್ರದರ್ಶನ ರವಿವಾರ ಸಮಾಪನ ಗೊಂಡಿತು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಜರಗಿದ ಸಮಾರೋಪ ಸಮಾರಂಭದಲ್ಲಿ ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಮನೋಹರ ಶೆಟ್ಟಿ, ಡಾ.ಪ್ರಶಾಂತ್ ಶೆಟ್ಟಿ, ಡಾ.ಶಶಿರಾಜ್ ಶೆಟ್ಟಿ ಎಂ. ಗಂಗಾಧರ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಭಾಗವಹಿಸಿದ್ದ ಶಾಲೆಗಳ ಮುಖ್ಯಸ್ಥರಿಗೆ ಪ್ರಮಾಣ ಪತ್ರಗಳನ್ನು ನೀಡಲಾಯಿತು. ಯಕ್ಷ ಕಿಶೋರ ಸಂಯೋಜಕ ವಿ.ಜಿ. ಶೆಟ್ಟಿ ಸ್ವಾಗತಿಸಿದರು. ಪ್ರಭಾತ್ ಶೆಟ್ಟಿ ವಂದಿಸಿದರು. ಶ್ರೀಕರ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಾರಾಯಣ ಎಂ. ಹೆಗಡೆ, ಎಚ್.ಎನ್. ಶೃಂಗೇಶ್ವರ ಸಹಕರಿಸಿದರೆ, ಟ್ರಸ್ಟ್‌ನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ಸಮಾರೋಪ ಸಮಾರಂಭದ ನಂತರ ಕಾಪು ದಂಡತೀರ್ಥ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಯಕ್ಷೋತ್ತಮ ಕಾಳಗ ಪ್ರಸಂಗ ಪ್ರಸ್ತುತಗೊಂಡಿತು.



Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News