×
Ad

ಏಡ್ಸ್ ನಿಯಂತ್ರಣ ಕುರಿತ ಮಾಹಿತಿ ಕಾರ್ಯಗಾರ

Update: 2024-01-09 19:14 IST

ಉಡುಪಿ : ಉಡುಪಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ವಿವಿಧ ಕಾಲೇಜುಗಳ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಿಗೆ ಏಡ್ಸ್ ನಿಯಂತ್ರಣ ಕುರಿತು ಮಾಹಿತಿ ಕಾರ್ಯಗಾರ ಜರಗಿತು.

ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆ ಸಂಯೋಜನಾಧಿಕಾರಿ ಡಾ.ನಾಗ ರತ್ನ ಕೆ.ಎ. ಉದ್ಘಾಟಿಸಿದರು. ಉಡುಪಿ ಆರೋಗ್ಯ ಇಲಾಖೆಯ ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಡಾ.ಚಿದಾನಂದ ಸಂಜು ಎಸ್.ವಿ. ಏಡ್ಸ್ ಕುರಿತ ಮಾಹಿತಿ ನೀಡಿದರು.

ಕೆಎಂಸಿ ಮಣಿಪಾಲ ಆಸ್ಪತ್ರೆಯ ಪೆಥಾಲಾಜಿಸ್ಟ್ ವಿಭಾಗದ ವೈದ್ಯೆ ಡಾ.ಚೆನ್ನ ದೀಪಿಕಾ, ಉಡುಪಿ ಜಿಲ್ಲಾ ಇಲಾಖೆ ಆರೋಗ್ಯ ಕಾರ್ಯಕ್ರಮ ಮೇಲ್ವಿಚಾರಕ ಮಹಾಭಲೇಶ್ವರ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News