×
Ad

ಪರ್ಯಾಯ ಮಹೋತ್ಸವ: ಉಡುಪಿ ನಗರದೊಳಗೆ ವಾಹನ ಸಂಚಾರದಲ್ಲಿ ಬದಲಾವಣೆ

Update: 2024-01-11 19:58 IST

ಫೈಲ್‌ ಫೋಟೊ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಡೆಯುವ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಜನವರಿ 17 ಮತ್ತು 18ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿ ರುವುದರಿಂದ ಸಾರ್ವಜನಿಕರಿಗೆ ಹಾಗೂ ಭಕ್ತಾದಿಗಳಿಗೆ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮ 1989 ರ ನಿಯಮ 221 5(ಎ)ರ ಅನ್ವಯ ಈ ಕೆಳಕಂಡ ರಸ್ತೆಗಳಿಗೆ ಬದಲಿ ಮಾರ್ಗ ಹಾಗೂ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಜ.17ರಂದು ಸಂಜೆ 4 ಗಂಟೆಯಿಂದ ಮಂಗಳೂರಿನಿಂದ ಉಡುಪಿ ಮತ್ತು ಮಣಿಪಾಲ ಕಡೆಗೆ ಹೋಗುವ ಎಲ್ಲಾ ಖಾಸಗಿ ಬಸ್ಸುಗಳು ಸ್ವಾಗತಗೋಪುರ ರಸ್ತೆಯಲ್ಲಿ ಸಂಚಾರ ಮಾಡದೇ ರಾ.ಹೆ-66 ಮೂಲಕ ಕರಾವಳಿ ಜಂಕ್ಷನ್ -ಬನ್ನಂಜೆ- ಶಿರಿಬೀಡು-ಸಿಟಿ ಬಸ್ಸು ನಿಲ್ದಾಣ-ಐರೋಡಿಕರ್-ಸರ್ವಿಸ್ ಬಸ್ಸು ನಿಲ್ದಾಣ ತಲುಪಬೇಕು. ಅದೇ ರೀತಿ ಮಂಗಳೂರಿಗೆ ತೆರಳುವ ಬಸ್ಸುಗಳು ಸರ್ವಿಸ್ ಬಸ್‌ನಿಲ್ದಾಣದಿಂದ -ಕಿದಿಯೂರು ಹೊಟೇಲ್ ಮೂಲಕ ಕೆಳಗೆ ಇಳಿದು ಶಿರಿಬೀಡು- ಬನ್ನಂಜೆ- ಕರಾವಳಿ ಜಂಕ್ಷನ್-ರಾ.ಹೆ 66 ಮೂಲಕ ಮಂಗಳೂರಿಗೆ ಸಂಚರಿಸಬೇಕು.

ಜ.17ರಂದು ಸಂಜೆ 4 ಗಂಟೆಯಿಂದ ಕುಂದಾಪುರ ಕಡೆಯಿಂದ ಉಡುಪಿಗೆ ಬರುವ ಎಲ್ಲಾ ಖಾಸಗಿ ಬಸ್ಸುಗಳು ಸಂತೆಕಟ್ಟೆ- ಅಂಬಾಗಿಲು- ನಿಟ್ಟೂರು- ಕರಾವಳಿ ಜಂಕ್ಷನ್- ಬನ್ನಂಜೆ- ಶಿರಿಬೀಡು- ಸಿಟಿ ಬಸ್ಸು ನಿಲ್ದಾಣ- ಐರೋಡಿ ಸರ್ವಿಸ್ ಬಸ್ಸು ನಿಲ್ದಾಣ ತಲುಪಬೇಕು. ಅಲ್ಲಿಂದ ಕಿದಿಯೂರು ಹೋಟೆಲ್ ಮೂಲಕ ಕೆಳಗೆ ಇಳಿದು ಶಿರಿಬೀಡು- ಬನ್ನಂಜೆ -ಕರಾವಳಿ ಜಂಕ್ಷನ್ -ರಾ.ಹೆ. 66 ಮೂಲಕ ಕುಂದಾಪುರಕ್ಕೆ ಸಂಚರಿಸಬೇಕು.

ಜ.17ರಂದು ಸಂಜೆ 4 ಗಂಟೆಯಿಂದ ಕಾರ್ಕಳ, ಮಣಿಪಾಲ ಕಡೆಯಿಂದ ಉಡುಪಿಗೆ ಬರುವ ಎಲ್ಲಾ ಖಾಸಗಿ ಬಸ್ಸುಗಳು ಇಂದ್ರಾಳಿ- ಎಂಜಿಎಂ- ಕಡಿಯಾಳಿ- ಕಲ್ಸಂಕ- ಉಡುಪಿ ಸಿಟಿ ಬಸ್ಸು ನಿಲ್ದಾಣಕ್ಕೆ ಬಂದು ಅಲ್ಲಿಂದ ತಿರುಗಿಸಿ ವಾಪಸು ಕಲ್ಸಂಕ -ಎಂ.ಜಿ.ಎಂ -ಇಂದ್ರಾಳಿ ಮೂಲಕ ಮಣಿಪಾಲ, ಕಾರ್ಕಳ ಕಡೆಗೆ ಸಂಚಾರ ಮಾಡಬೇಕು.

ಜ.17ರಂದು ಸಂಜೆ 4 ಗಂಟೆಯಿಂದ ರಾಂಪುರ, ಕುಕ್ಕಿಕಟ್ಟೆ, ಮೂಡುಬೆಳ್ಳೆ ಕಡೆಯಿಂದ ಉಡುಪಿಗೆ ಬರುವ ಎಲ್ಲಾ ಬಸ್ಸು ಗಳು ಮಿಶನ್ ಕಂಪೌಂಡ್‌ನಿಂದ ಬಲಕ್ಕೆ ತಿರುಗಿ ಅಮ್ಮಣ್ಣಿ ರಾಮಣ್ಣ- ಚಿಟ್ಪಾಡಿ ಜಂಕ್ಷನ್‌ನಿಂದ ಎಡಕ್ಕೆ ತಿರುಗಿ-ಬೀಡಿನಗುಡ್ಡೆ ಜಂಕ್ಷನ್-ಶಾರದ ಕಲ್ಯಾಣ ಮಂಟಪ ಜಂಕ್ಷನ್ ಎಡಕ್ಕೆ ತಿರುಗಿ-ಕಲ್ಸಂಕ-ಸಿ.ಟಿ ಬಸ್ಸು ನಿಲ್ದಾಣ ಐರೋಡಿಕರ್-ಸಿಟಿ ಬಸ್ಸು ನಿಲ್ದಾಣಕ್ಕೆ ಬಂದು ನಂತರ ಅದೇ ರಸ್ತೆ ಮಾರ್ಗವಾಗಿ ವಾಪಸು ಸಂಚರಿಸಬೇಕು.

ಜ.17ರಂದು ಸಂಜೆ 4 ಗಂಟೆಯಿಂದ ಮಲ್ಪೆ ಕಡೆಯಿಂದ ಉಡುಪಿಗೆ ಬರುವ ಖಾಸಗಿ ಬಸ್ಸುಗಳು ಆದಿಉಡುಪಿ-ಕರಾವಳಿ ಜಂಕ್ಷನ್ -ಬನ್ನಂಜೆ- ಶಿರಿಬೀಡು- ಐರೋಡಿಕರ್- ಸಿಟಿ ಬಸ್ಸು ನಿಲ್ದಾಣಕ್ಕೆ ಬಂದು ವಾಪಸು ಶಿರಿಬೀಡು-ಬನ್ನಂಜೆ ಕರಾವಳಿ ಜಂಕ್ಷನ್ -ಆದಿಉಡುಪಿ ಮಾರ್ಗವಾಗಿ ಮಲ್ಪೆ ಕಡೆಗೆ ವಾಪಾಸು ಸಂಚರಿಸಬೇಕು.

ಜ.17ರಂದು ದೂರ ಪ್ರಯಾಣದ ಬುಕ್ಕಿಂಗ್ ಏಜೆಂಟ್ ಮತ್ತು ಬಸ್ ಕಂಪನಿಯವರು ರಾತ್ರಿ ಉಡುಪಿ ಸಿಟಿ ಒಳಗೆ ಪ್ರವೇಶ ಮಾಡದೇ ಕರಾವಳಿ ಜಂಕ್ಷನ್‌ನಲ್ಲಿ ಪ್ರಯಾಣಿಕರನ್ನು ಹತ್ತಿಸಿ, ಇಳಿಸಬೇಕು.

ಜ.17ರಂದು ಸಂಜೆ 6 ಗಂಟೆಯಿಂದ ಜ.18ರ ಬೆಳಗ್ಗೆ 6 ಗಂಟೆಯವರೆಗೆ ಸ್ವಾಗತ ಗೋಪುರ, ಕಿನ್ನಿಮೂಲ್ಕಿ, ಗೋವಿಂದ ಕಲ್ಯಾಣ ಮಂಟಪ, ಜೋಡುಕಟ್ಟೆ, ಟಿ.ಎಂ.ಎ.ಪೈ ಆಸ್ಪತ್ರೆ, ಲಯನ್ಸ್ ಸರ್ಕಲ್, ಹಳೇ ಡಯಾನ ಸರ್ಕಲ್, ಮಿತ್ರ ಜಂಕ್ಷನ್, ತೆಂಕಪೇಟೆ, ರಥಬೀದಿ ರಸ್ತೆಯ ಅಕ್ಕಪಕ್ಕ ವಾಹನ ಸಂಚಾರ ಮತ್ತು ಪಾರ್ಕಿಂಗ್‌ನ್ನು ನಿಷೇಧಿಸಲಾಗಿದೆ. ಕಲ್ಸಂಕ ಜಂಕ್ಷನ್‌ನಿಂದ ವಿದ್ಯೋದ್ಯಯ ಶಾಲೆವರೆಗೆ ರಸ್ತೆ ಬದಿಯಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ.

ಜ.17ರಂದು ಸಂಜೆ 6 ಗಂಟೆಯಿಂದ ಜ.18ರ ಬೆಳಗ್ಗೆ 6 ಗಂಟೆಯವರೆಗೆ ನಾಗಬನಕ್ರಾಸ್‌ನಿಂದ ಜಾಮೀಯ ಮಸೀದಿ ರಸ್ತೆಯವರೆಗೆ, ಕುಂಜೂರು ಎಲೆಕ್ಟ್ರಿಕಲ್ಸ್‌ನಿಂದ ಗೀತಾಂಜಲಿ ರಸ್ತೆಯವರೆಗೆ, ಸರ್ವಿಸ್ ಬಸ್ಸು ನಿಲ್ದಾಣದ ಪೊಲೀಸ್ ಔಟ್ ಪೋಸ್ಟ್‌ನಿಂದ ಕವಿ ಮುದ್ದಣ್ಣ ರಸ್ತೆಯವರೆಗೆ, ವಿಷ್ಣು ಫ್ಲವರ್ ಸ್ಟಾಲ್‌ನಿಂದ ಜಾಮೀಯ ಮಸೀದಿ ರಸ್ತೆಯವರೆಗೆ, ಭಾಸ್ಕರ ವಿಹಾರ್ ರಸ್ತೆಯಿಂದ ಜಾಮೀಯ ಮಸೀದಿ ರಸ್ತೆಯವರೆಗೆ, ಕಲ್ಸಂಕದಿಂದ ಬಡಗುಪೇಟೆ ರಸ್ತೆಯವರೆಗೆ, ಸೌತ್ ಶಾಲೆಯ ಬಳಿ ವೆಂಕಟರಮಣ ದೇವಸ್ಥಾನಕ್ಕೆ ಹೋಗುವ ರಸ್ತೆಯವರೆಗೆ, ಜೋಡುಕಟ್ಟೆಯಿಂದ ಬ್ರಹ್ಮಗಿರಿಗೆ ಹೋಗುವ ರಸ್ತೆಯ ಬೇತಲ್ ಚರ್ಚ್ ಬಳಿ, ಎಲ್‌ಐಸಿ ರಸ್ತೆಯ ಸಿಂಡಿಕೇಟ್ ಟವರ್ ಬಳಿ, ಅಲಂಕಾರ್ ಟಾಕೀಸ್ ರಸ್ತೆಯ ಬಳಿ, ಮಿಷನ್ ಆಸ್ಪತ್ರೆಯಿಂದ ಲಯನ್ಸ್ ಸರ್ಕಲ್ ಬರುವ ರಸ್ತೆಯಲ್ಲಿ ಮಿಷನ್ ಆಸ್ಪತ್ರೆ ಎದುರು, ಅಮ್ಮಣ್ಣಿ ರಾಮಣ್ಣ ಹಾಲ್ ಎದುರಿನ ಪಿಪಿಸಿ ಕಾಲೇಜ್‌ಗೆ ಹೋಗುವ ರಸ್ತೆಯ ಅಮ್ಮಣ್ಣಿ ರಾಮಣ್ಣ ಹಾಲ್ ಎದುರು, ತ್ರಿನಿಟಿ ಐಟಿಐ ಕಾಲೇಜಿನ ಎದುರಿನಿಂದ ಸೌತ್ ಶಾಲೆಗೆ ಹೋಗುವ ರಸ್ತೆಯ ತ್ರಿನಿಟಿ ಕಾಲೇಜ್ ಎದುರು ಹಾಗೂ ಬೀಡಿನಗುಡ್ಡೆಯಿಂದ ವೆಂಕಟರಮಣ ದೇವಸ್ಥಾನಕ್ಕೆ ಬರುವ ರಸ್ತೆಯ ಬೀಡಿನಗುಡ್ಡೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News