‘ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಸಿ.ಟಿ.ರವಿ ಚಾಲನೆ
ಉಡುಪಿ, ಜ.23: ಮುಂದಿನ ಲೋಕಸಭಾ ಚುನಾವಣೆಯ ಪ್ರಯುಕ್ತ ‘ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಬಿಜೆಪಿ ನಿಕಟ ಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಡಿಯಾಳಿಯಲ್ಲಿ ಮಂಗಳವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್ ಬನ್ನಂಜೆ, ಪೆರಣಂಕಿಲ ಶ್ರೀಶ ನಾಯಕ್, ಬಿಜೆಪಿ ದ.ಕ. ಸಹ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಅಂಚನ್, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಕಟ್ಟಡ ಮಾಲಕ ಮುರಳೀಧರ ಪೈ, ದಾವೂದ್ ಅಬೂಬಕರ್, ಅಲ್ವಿನ್ ಡಿಸೋಜ, ದಿನೇಶ್ ಅಮೀನ್, ಸಚಿನ್ ಪೂಜಾರಿ, ರೋಷನ್ ಶೆಟ್ಟಿ, ರಾಧಾಕೃಷ್ಣ ಶೆಟ್ಟಿ, ದಿನಕರ ಪೂಜಾರಿ, ಕಿಶೋರ್ ಕರಂಬಳ್ಳಿ ಉಪಸ್ಥಿತರಿದ್ದರು.