×
Ad

ಉದ್ಯಾವರ ಪಿತ್ರೋಡಿ ನದಿಗೆ ಖಾರ್ಲ್ಯಾಂಡ್ ನಿರ್ಮಾಣ

Update: 2024-01-29 19:46 IST

ಉಡುಪಿ: ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿತ್ರೋಡಿ ಭಾಗದಲ್ಲಿ ನದಿಗೆ 6 ಕೋಟಿ ರೂ. ವೆಚ್ಚದಲ್ಲಿ ಖಾರ್ಲ್ಯಾಂಡ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಇಂದು ಇಲಾಖಾಧಿಕಾರಿ ಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲತಿ ಸಾಲ್ಯಾನ್, ಉಪಾಧ್ಯಕ್ಷ ರಾಜೇಶ್ ಕುಂದರ್, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಅಭಿಯಂತರರಾದ ಅರುಣ್ ಭಂಡಾರಿ, ಸಹಾಯಕ ಅಭಿಯಂತರ ಮಮತಾ ಹಾಗೂ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News