×
Ad

ಯುವಜನತೆಯಿಂದ ನಿರುದ್ಯೋಗದ ವಿರುದ್ಧ ಹೋರಾಟ ಅಗತ್ಯ: ಕಲ್ಲಾಗರ್

Update: 2024-02-05 19:28 IST

ಕುಂದಾಪುರ, ಫೆ.5: ಆಳುವವರ ನೀತಿಗಳಿಂದಾಗಿ ಯುವಜನರಿಗೆ ಉದ್ಯೋಗದ ಅಭದ್ರತೆ ಕಾಡುತ್ತಿದೆ. ಆದುದರಿಂದ ವಿವಿಧ ಮತಗಳ ಯುವಜನರು ಒಂದಾಗಿ ನಿರುದ್ಯೋಗದ ವಿರುದ್ಧ ಹೋರಾಡಬೇಕು ಅಂತಹ ಹೋರಾಟ ಮುನ್ನೆಡೆಸಲು ಡಿವೈಎಫ್‌ಐ ಎಂಬ ಪ್ರಗತಿಪರ ಸಂಘಟನೆಗೆ ಮಾತ್ರ ಸಾಧ್ಯ ಎಂದು ಡಿವೈಎಫ್‌ಐ ತಾಲೂಕು ಉಪಾಧ್ಯಕ್ಷ ಸುರೇಶ್ ಕಲ್ಲಾಗರ ಹೇಳಿದ್ದಾರೆ.

ಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿ ಎಂಬ ಘೋಷಣೆ ಅಡಿಯಲ್ಲಿ ಕುಂದಾಪುರ ಹಂಚು ಕಾರ್ಮಿಕರ ಭವನ ದಲ್ಲಿ ರವಿವಾರ ಆಯೋಜಿಸಲಾದ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ) ಕುಂದಾಪುರ 15ನೇ ತಾಲೂಕು ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ದೇಶದಲ್ಲಿ ಶೇ.35ರಷ್ಟು ಮಂದಿ ಯುವಜನರು ದೇಶದಲ್ಲಿದ್ದು ದೇಶವನ್ನು ಸಂಪದ್ಭರಿತವಾಗಿ ಕಟ್ಟುವ ಸಾಮರ್ಥ್ಯ ಹೊಂದಿ ದ್ದಾರೆ. ನಿರುದ್ಯೋಗದ ವಿರುದ್ಧ ಒಂದಾಗಬೇಕಾದ ಯುವಜನತೆ ಇಂದು ನಂಬಿಕೆಗಳು, ಆಚರಣೆಗಳ ವಿಚಾರ ವಾಗಿ ಅಪನಂಬಿಕೆಗಳು ಬೆಳೆದು ಬರುತ್ತಿರುವುದು ಐಕ್ಯತೆಗೆ ಅಪಾಯಕಾರಿ ಯಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಡಿವೈಎಫ್‌ಐ ಮಾಜಿ ಅಧ್ಯಕ್ಷ ಎಚ್.ನರಸಿಂಹ, ಸಿಐಟಿಯು ತಾಲೂಕು ಸಂಚಾಲಕ ಚಂದ್ರಶೇಖರ, ಜನವಾದಿ ಮಹಿಳಾ ಸಂಘಟನೆಯ ನಾಯಕಿ ಶೀಲಾವತಿ ಪಡುಕೋಣೆ, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಮುಖಂಡರಾದ ಶ್ರೀಧರ ನಾಡ ಮಾತನಾಡಿದರು.

ಡಿವೈಎಫ್‌ಐ ತಾಲೂಕು ಕಾರ್ಯದರ್ಶಿ ಗಣೇಶ್ ದಾಸ್ ವರದಿ ಮಂಡಿಸಿ ದರು. ವರದಿ ಸಮ್ಮೇಳನದ ಅಧ್ಯಕ್ಷತೆಯನ್ನು ಡಿವೈಎಫ್‌ಐ ಅಧ್ಯಕ್ಷ ರಾಜೇಶ್ ವಡೇರಹೋಬಳಿ ವಹಿಸಿ ಧ್ವಜಾರೋಹಣ ನೆರವೇರಿಸಿದರು. ರವಿ ವಿಎಂ ಅತಿಥಿಗಳನ್ನು ಗೌರವಿಸಿದರು.

ಇದೇ ಸಂದರ್ಭದಲ್ಲಿ ನೂತನ ಸಮಿತಿ ಆಯ್ಕೆಯನ್ನು ಮಾಡಲಾಯಿತು. ಅಧ್ಯಕ್ಷರಾಗಿ ಗಣೇಶ್ ದಾಸ್ ಕಾರ್ಯದರ್ಶಿಯಾಗಿ ನಿಸರ್ಗ ಅವರನ್ನು ಆಯ್ಕೆ ಮಾಡಲಾಯಿತು. 17 ಮಂದಿ ಪದಾಧಿಕಾರಿಗಳನ್ನೊಳಗೊಂಡ 26 ಮಂದಿಯ ತಾಲೂಕು ಸಮಿತಿ ರಚಿಸಲಾಯಿತು. ಫೆಬ್ರವರಿ 11ರಂದು ಉಡುಪಿಯಲ್ಲಿ ನಡೆಯುವ ಯುವಜನರ ಜಿಲ್ಲಾ ಸಮಾವೇಶ ಹಾಗೂ ಫೆ.25-27ರವರೆಗೆ ನಡೆಯುವ ರಾಜ್ಯ ಸಮ್ಮೇಳನ ಯಶಸ್ವಿಗೊಳಿಸಲು ನಿರ್ಧರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News