ಹಾವು ಕಡಿತ: ಯುವಕ ಮೃತ್ಯು
Update: 2024-02-09 20:29 IST
ಉಡುಪಿ: ಹಾವು ಕಡಿತಕ್ಕೆ ಒಳಗಾಗಿದ್ದ ಎನ್ನಲಾದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಶಿರ್ವದ ಆನಂದ(27) ಎಂದು ಗುರುತಿಸಲಾಗಿದೆ. ಇವರು ಫೆ.3ರಂದು ಮೆಡಿಕೆಟ್ಟುವಿನಲ್ಲಿ ಕೆಲಸಕ್ಕೆ ಹೋದಾಗ ಹಾವು ಕಚ್ಚಿದ್ದು, ಅವರನ್ನು ಉಡುಪಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯಲ್ಲಿದ್ದ ಇವರು ಫೆ.6ರಂದು ಆಸ್ಪತ್ರೆಯ ಐಸಿಯು ಗಾಜಿನ ಬಾಗಿಲು ಒಡೆದು ತಪ್ಪಿಸಿಕೊಂಡು ಹೋಗಿದ್ದನು.
ಬಳಿಕ ಪೊಲೀಸರು ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲು ಮಾಡಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಫೆ.7ರಂದು ರಾತ್ರಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.