×
Ad

ತೊಟ್ಟಂ ಸಮನ್ವಯ ಸರ್ವಧರ್ಮ ಸಮಿತಿಯಿಂದ ವಡಭಾಂಡೇಶ್ವರ ದೇವಸ್ಥಾನಕ್ಕೆ ಸೌಹಾರ್ದ ಭೇಟಿ

Update: 2024-03-28 18:38 IST

ಉಡುಪಿ, ಮಾ.28: ನೂರಾರು ವರ್ಷಗಳ ಇತಿಹಾಸ ಹೊಂದಿರುವ ಮಲ್ಪೆ ವಡಭಾಂಡೇಶ್ವರ ಬಲರಾಮ ದೇವಸ್ಥಾನದಲ್ಲಿ ಜರಗಿದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆದ ರಥೋತ್ಸವ ಕಾರ್ಯಕ್ರಮದಲ್ಲಿ ಸಮನ್ವಯ ಸರ್ವಧರ್ಮ ಸಮಿತಿ ತೊಟ್ಟಂ ಇದರ ಸದಸ್ಯರು ಭಾಗವಹಿಸಿ ಸೌಹಾರ್ದತೆಯ ಸಂದೇಶವನ್ನು ವಿನಿಮಯ ಮಾಡಿಕೊಂಡರು.

ಈ ಸಂದರ್ಭ ಮಾತನಾಡಿದ ತೊಟ್ಟಂ ಚರ್ಚಿನ ಧರ್ಮಗುರುಗಳಾದ ವಂ. ಡೆನಿಸ್ ಡೆಸಾ, ಎಲ್ಲಾ ಧರ್ಮಗಳೂ ಶಾಂತಿ ಮತ್ತು ಪ್ರೀತಿಯನ್ನು ಬೋಧಿಸುತ್ತವೆ. ತೊಟ್ಟಂ ಸಮನ್ವಯ ಸರ್ವಧರ್ಮ ಸಮಿತಿ ಇದೇ ಉದ್ದೇಶ ದಿಂದ ಕಾರ್ಯಾಚರಿಸು ತ್ತಿದ್ದು, ಸಮಾಜದಲ್ಲಿ ಶಾಂತಿ ಸೌಹಾರ್ದತೆಯನ್ನು ಬಯಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾ ಗಿದೆ ಎಂದರು.

ನಮ್ಮ ವ್ಯಾಪ್ತಿಯಲ್ಲಿ ನೂರಾರು ವರ್ಷಗಳ ಇತಿಹಾಸ ಹೊಂದಿರುವ ವಡಭಾಂಡೇಶ್ವರ ಬಲರಾಮ ದೇವಸ್ಥಾನ ಜೀರ್ಣೋ ದ್ಧಾರಗೊಂಡು ಅದರ ಅಷ್ಟಬಂಧ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಿ ಪರಸ್ಪರ ಸೌಹಾರ್ದತೆಯ ಸಂದೇಶವನ್ನು ವಿನಿಮಯ ಮಾಡಿಕೊಂಡಿದ್ದೇವೆ. ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಸೌಹಾರ್ದತೆಯ ಸಂದೇಶ ಸಾರಲು ಸಹಾಯಕವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಸಮನ್ವಯ ಸರ್ವಧರ್ಮ ಸಮಿತಿ ತೊಟ್ಟಂ ಇದರ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ವಡಭಾಂಡೇಶ್ವರ ಬಲರಾಮ ದೇವಸ್ಥಾನದ ವತಿಯಿಂದ ಗೌರವವನ್ನು ಸಲ್ಲಿಸಲಾಯಿತು.

ಈ ವೇಳೆ ಬಲರಾಮ ದೇವಸ್ಥಾನದ ಶಶಿಧರ ಎಂ ಅಮೀನ್, ಟಿ. ಶ್ರೀನಿವಾಸ ಭಟ್, ನಾಗರಾಜ್ ಮೂಲ್ಕಿ, ಸಾಧು ಸಾಲ್ಯಾನ್, ಪ್ರಕಾಶ್ ಜಿ ಕೊಡವೂರು, ಶಂಕರನಾರಾಯಣ ಐತಾಳ್, ಸಮನ್ವಯ ಸೌಹಾರ್ದ ಸಮಿತಿಯ ಅಧ್ಯಕ್ಷ ರಮೇಶ್ ತಿಂಗಳಾಯ, ಕಾರ್ಯದರ್ಶಿ ಲೆಸ್ಲಿ ಅರೋಜಾ, ಡಿಕನ್ ಸ್ಟೀಫನ್ ರೊಡ್ರಿಗಸ್, ಸಿಸ್ಟರ್ ಡಯಾನ, ಗ್ಲಾಡ್ಸನ್ ಮಾಬೇನ್, ವನಿತಾ ಫೆರ್ನಾಂಡಿಸ್, ಆಗ್ನೆಲ್ ಫೆರ್ನಾಂಡಿಸ್, ಪ್ರಭಾಕರ್, ಶೋಭಾ, ವಿನೋದ್ ಉಪಸ್ಥಿತರಿದ್ದರು.

ಇದೇ ವೇಳೆ ಸಮನ್ವಯ ಸೌಹಾರ್ದ ಸಮಿತಿಯ ಸದಸ್ಯರು ಶ್ರೀಪಂಡರಿನಾಥ ವಿಠೋಭ ಭಜನಾ ಮಂದಿರ ಬಡಾನಿಡಿ ಯೂರು ತೊಟ್ಟಂ ಇದರ 77ನೇ ವಾರ್ಷಿಕ ಅಖಂಡ ಭಜನಾ ಮಹಾಮಂಗಲೋತ್ಸವ ಕಾರ್ಯಕ್ರಮದಲ್ಲಿ ಕೂಡ ಭಾಗವಹಿಸಿ ಶುಭಾಶಯ ವಿನಿಮಯ ಮಾಡಿಕೊಂಡರು.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News