ಮಹಾತ್ಮರ ಆದರ್ಶಗಳನ್ನು ಬದುಕಲ್ಲಿ ಅಳವಡಿಸಿಕೊಳ್ಳೋಣ: ಉಡುಪಿ ಡಿಸಿ ವಿದ್ಯಾಕುಮಾರಿ

Update: 2024-03-28 15:29 GMT

ಉಡುಪಿ: ಶ್ರಮಜೀವನಕ್ಕೆ ಹೆಸರಾಗಿರುವ ತಿಗಳ ಸಮುದಾಯ ದ ಆರಾಧ್ಯದೈವ ಅಗ್ನಿಬನ್ನಿರಾಯರು. ಇಂತಹ ಮಹಾತ್ಮರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಜೀವನ ಅರ್ಥಪೂರ್ಣವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಹೇಳಿದ್ದಾರೆ.

ಗುರುವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಅಗ್ನಿಬನ್ನಿರಾಯ ಜಯಂತಿ ಕಾರ್ಯಕ್ರಮದಲ್ಲಿ ಅಗ್ನಿಬನ್ನಿ ರಾಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು.

ತೋಟಗಾರಿಕೆ ಕಸುಬನ್ನು ಮಾಡಿಕೊಂಡು ಬರುತ್ತಿರುವ ತಿಗಳ ಜನಾಂಗ ದವರಿಗೆ ಗೌರವ ಸೂಚಿಸುವ ಸಲುವಾಗಿ ಅಗ್ನಿ ಬನ್ನಿರಾಯರ ಜಯಂತಿಯನ್ನು ಆಚರಿಸಲಾಗುತ್ತಿದೆ. ತಿಗಳ ಸಮುದಾಯದರು ತಮ್ಮ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ, ಎಲ್ಲಾ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕರೆ ನೀಡಿದರು.

ಕನ್ನಡ ಸಾಹಿತ್ಯ ಪರಿಷತಿತನ ಉಡುಪಿ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಒಂಭತ್ತಕ್ಕೂ ಹೆಚ್ಚು ಪುರಾಣಗಳಲ್ಲಿ ಅಗ್ನಿ ಬನ್ನಿರಾಯರ ಬಗ್ಗೆ ಪ್ರಸ್ತಾಪಿಸಲಾಗಿದೆ. ಅವರು ಅಂದಿನ ಕಾಲಘಟ್ಟದಲ್ಲಿಯೇ ಭೂ ರಕ್ಷಣೆ, ಸ್ತ್ರೀ ರಕ್ಷಣೆ, ನೆಲ ಹಾಗೂ ಗೋ ರಕ್ಷಣೆಗಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು. ನಾವೆಲ್ಲರೂ ಇದನ್ನು ಮುಂದುವರೆಸಿಕೊಂಡು ಹೋಗಬೇಕು ಎಂದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್, ಕಸಾಪ ಕಾರ್ಯದರ್ಶಿ ನರಸಿಂಹಮೂರ್ತಿ, ಕನ್ನಡ ಉಪನ್ಯಾಸಕ ರಾಮಾಂಜಿ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.



Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News