ಉಡುಪಿ: ಕ್ಯಾನ್ಸರ್‌ಗೆ ವಿಶೇಷ ಆಯುರ್ವೇದ ಚಿಕಿತ್ಸಾ ಕ್ರಮದ ಶಿಬಿರ

Update: 2024-04-27 16:01 GMT

ಉಡುಪಿ, ಎ.27: ಮಣಿಪಾಲದ ಶಿವಳ್ಳಿ ಇಂಡಸ್ಟ್ರೀಯಲ್ ಪ್ರದೇಶಷದಲ್ಲಿರುವ ಮುನಿಯಾಲ್ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯು ತನ್ನ ರಜತ ಮಹೋತ್ಸವದ ಭಾಗವಾಗಿ ಎ.29ರಿಂದ ಮೇ 4ರವರೆಗೆ ಬೆಳಗ್ಗೆ 9 ರಿಂದ ಸಂಜೆ 4 ರವರೆಗೆ ಕ್ಯಾನ್ಸರ್‌ಗೆ ವಿಶೇಷ ಆಯುರ್ವೇದ ಚಿಕಿತ್ಸಾ ಶಿಬಿರ ‘ಮಹೋಷಧಕಲ್ಪ’ವನ್ನುಆಯೋಜಿಸಿದೆ.

ಈ ಶಿಬಿರದಲ್ಲಿ ಉಚಿತ ತಪಾಸಣಾ ಹಾಗೂ ರಿಯಾಯಿತಿ ದರದಲ್ಲಿ ಚಿಕಿತ್ಸೆ ಲಭ್ಯವಿದೆ.ದೈಹಿಕವಾಗಿ ಮತ್ತು ಮಾನಸಿಕವಾಗಿ ರೋಗಿಯನ್ನು ಪುನರುಜ್ಜೀವನ ಗೊಳಿಸಲು ಮತ್ತು ಪುನಶ್ಚೇತನಗೊಳಿಸಲು ಮಹೋಷಧಕಲ್ಪ ಸಹಾಯ ಮಾಡುತ್ತದೆ. ದೀರ್ಘಾವಧಿಯಿಂದ ತೀವ್ರವಾದ ಕ್ಯಾನ್ಸರ್‌ನಿಂದ ಬಳಲುತ್ತಿ ರುವ ಮತ್ತು ಚಿಕಿತ್ಸೆಗೆ ಪಡೆಯುತ್ತಿರುವ ರೋಗಿಗಳಿಗೆ ಇದು ಪ್ರಯೋಜನಕಾರಿ. ಎಲ್ಲಾ ರೀತಿಯ ಕ್ಯಾನ್ಸರ್ ಮತ್ತು ಅದರ ಚಿಕಿತ್ಸೆಯ ಅಡ್ಡಪರಿಣಾಮಗಳಿಂದ ಬಳಲುತ್ತಿರುವ ಕ್ಯಾನ್ಸರ್ ರೋಗಿಗಳು ಈ ಶಿಬಿರದ ಪ್ರಯೋಜನವನ್ನು ಪಡೆಯಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಶಿಬಿರದ ಕುರಿತು ಹೆಚ್ಚಿನ ಮಾಹಿತಿಗೆ ಮೊಬೈಲ್ ನಂ. 8123403233ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News