ಪಿಯುಸಿಯಲ್ಲಿ ದ್ವಿತೀಯ ಸ್ಥಾನ ಪಡೆದ ವೈಭವಿ ಆಚಾರ್ಯಗೆ ಪ್ರತಿಭಾ ಪುರಸ್ಕಾರ
Update: 2024-04-28 13:48 GMT
ಉಡುಪಿ, ಎ.28: ಉಡುಪಿ ನಗರ ಬಿಜೆಪಿ ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 597 ಅಂಕಗಳಿಸಿ ರಾಜ್ಯ ದಲ್ಲಿ ದ್ವಿತೀಯ ಸ್ಥಾನವನ್ನು ಪಡೆದ ಉಡುಪಿ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ, ಉಡುಪಿ ಸುಬ್ರಮಣ್ಯ ನಗರದ ವೈಭವಿ ಆಚಾರ್ಯ ಅವರನ್ನು ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.
ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ವಿದ್ಯಾರ್ಥಿನಿಯನ್ನು ಆಕೆಯ ನಿವಾಸದಲ್ಲಿ ಸನ್ಮಾನಿಸಿ, 10000ರೂ. ಪ್ರತಿಭಾ ಪುರಸ್ಕಾರ ನೀಡಿದರು.
ಈ ಸಂದರ್ಭದಲ್ಲಿ ನಗರ ಸಭಾ ಸದಸ್ಯೆ ಜಯಂತಿ ಪೂಜಾರಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ.ಶೆಟ್ಟಿ, ವೈಭವಿ ಶೆಟ್ಟಿ ಪೋಷಕರಾದ ಶಂಖಪಾಲ ಆಚಾರ್ಯ, ವಿದ್ಯಾ ಎಸ್. ಆಚಾರ್ಯ, ಪಕ್ಷದ ಪ್ರಮುಖರಾದ ಉಮೇಶ್ ಶೆಟ್ಟಿ, ಚಿನ್ಮಯ ಮೂರ್ತಿ, ಶ್ರೀನಿವಾಸ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.