ಬೈಕ್ ಢಿಕ್ಕಿ: ರಸ್ತೆ ದಾಟುತ್ತಿದ್ದ ಟ್ಯಾಂಕರ್ ಚಾಲಕ ಮೃತ್ಯು
ಪಡುಬಿದ್ರಿ: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಟ್ಯಾಂಕರ್ ಚಾಲಕರೊಬ್ಬರು ಮೃತಪಟ್ಟ ಘಟನೆ ತೆಂಕ ಎರ್ಮಾಳು ಗ್ರಾಮದ ಲಕ್ಷ್ಮೀ ಜನಾರ್ದನ ಹೊಟೇಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎ.27ರಂದು ರಾತ್ರಿ ನಡೆದಿದೆ.
ಮೃತರನ್ನು ದ.ಕ. ಜಿಲ್ಲೆಯ ಬಿ.ಸಂಜೀವ(58) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನಿಂದ ಉಡುಪಿ ಕಡೆಗೆ ಟ್ಯಾಂಕರ್ ಚಲಾಯಿಸಿಕೊಂಡು ಬಂದು ಹೊಟೇಲ್ಗೆ ಹೋಗಲು ತೆಂಕ ಎರ್ಮಾಳು ಬಳಿ ನಿಲ್ಲಿಸಿದರು. ಬಳಿಕ ರಸ್ತೆಯ ಇನ್ನೊಂದು ಬದಿಯಲ್ಲಿದ್ದ ಹೊಟೇಲ್ಗೆ ಹೋಗಲು ರಸ್ತೆಯನ್ನು ದಾಟಲು ರಸ್ತೆಯ ಬದಿ ನಿಂತಿದ್ದರು.
ಈ ವೇಳೆ ಉಡುಪಿ ಕಡೆಯಿಂದ ಪಡುಬಿದ್ರಿ ಕಡೆಗೆ ಹೋಗುತ್ತಿದ್ದ ಬೈಕ್, ಸಂಜೀವ ಅವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ವೇಳೆ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪರಘಾತದಲ್ಲಿ ಗಾಯಗೊಂಡ ಬೈಕ್ ಸವಾರ ಪೂರ್ಣಪ್ರಜ್ಞ ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.