ಮೂಡ್ಲಕಟ್ಟೆ ಎಂಐಟಿಕೆ: ರಾಜ್ಯ ಮಟ್ಟದ ಸಾವಿಷ್ಕಾರ್ ಉದ್ಘಾಟನೆ

Update: 2024-05-02 13:27 GMT

ಕುಂದಾಪುರ, ಮೇ 2: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ ದಲ್ಲಿ ಟೆಕ್ನಾಲಜಿಯಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ಸಾಂಸ್ಕೃತಿಕ ಮತ್ತು ತಾಂತ್ರಿಕ ಸ್ಪರ್ಧಾಕೂಟ ‘ಸಾವಿಷ್ಕಾರ್’ ಬುಧವಾರ ಇಲ್ಲಿ ಉದ್ಘಾಟನೆ ಗೊಂಡಿತು.

ಸಂಸ್ಥೆಯ ಪ್ರಾಂಶುಪಾಲ ಡಾ.ಅಬ್ದುಲ್ ಕರೀಂ ಕಾರ್ಯಕ್ರಮದ ಲಾಂಛನ ವನ್ನು ಅನಾವರಣಗೊಳಿಸಿ ಫೆಸ್ಟ್‌ಗೆ ಚಾಲನೆ ನೀಡಿದರು. ಕಾರ್ಯಕ್ರಮದ ಸಂಚಾಲಕ, ಉಪಪ್ರಾಂಶುಪಾಲ ಡಾ.ಮೆಲ್ವಿನ್ ಡಿಸೋಜಾ, ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ.ರಾಮಕೃಷ್ಣ ಹೆಗ್ಡೆ, ಸಂಯೋಜಕ ಪ್ರೊ.ವರುಣ್ ಕುಮಾರ್, ವಿದ್ಯಾರ್ಥಿ ಪರಿಷತ್ ಕಾರ್ಯದರ್ಶಿ ಮನೋಜ್ ಶೆಟ್ಟಿ, ಉಪಾಧ್ಯಕ್ಷೆ ಪನ್ನಗಾ ಶೆಟ್ಟಿ, ವಿದ್ಯಾರ್ಥಿ ಕಾರ್ಯಕ್ರಮದ ಸಂಯೋಜಕ ಶ್ರೀ ಅನೀಶ್ ಪುತ್ರನ್ ಉಪಸ್ಥಿತರಿದ್ದರು.

ಸಾಂಸ್ಕೃತಿಕ ಮೇಳದಲ್ಲಿ 30ಕ್ಕೂ ಹೆಚ್ಚು ಕಾಲೇಜುಗಳ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಉದ್ಘಾಟನೆಯ ನಂತರ ವಿವಿಧ ಟೆಕ್ನೋ- ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ರೋಮಾಂಚನಕಾರಿ ಕಾರ್ ಎಕ್ಸ್‌ಪೋ ಸಹ ನಡೆಯಿತು.

ಅಲ್ಲದೇ ಬೈಕ್ ಸ್ಟಂಟ್‌ಮಾಸ್ಟರ್‌ಗಳು ತಮ್ಮ ಕಸರತ್ತಿನ ಮೂಲಕ ಎಲ್ಲರನ್ನು ರಂಜಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News